ಜಾಲಿವುಡ್ ಸ್ಟುಡಿಯೋ ಮುಚ್ಚಲು ಆದೇಶ ಮಾಡಿ ಭಾರೀ ಸುದ್ದಿಯಲ್ಲಿರುವ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಳೆದ 9 ತಿಂಗಳಲ್ಲಿ ರಾಜ್ಯದ 158 ಕಾರ್ಖಾನೆ, ಕೈಗಾರಿಕೆಗಳನ್ನು ಬಂದ್ ಮಾಡಲು ಆದೇಶ ಹೊರಡಿಸಿದೆ.
ಪ್ರಧಾನ ಮಂತ್ರಿ ಪೋಷಣ್ ಶಕ್ತಿ ಯೋಜನೆಯಡಿ ರಾಜ್ಯದ 9,337 ಶಾಲೆಗಳ ಅಡುಗೆ ಮನೆಗಳನ್ನು ಆಧುನೀಕರಿಸಲು ಹೊಸ ಪಾತ್ರೆ ಪರಿಕರಗಳ ಖರೀದಿಗೆ ಸರ್ಕಾರ 21.55 ಕೋಟಿ ರು. ಅನುದಾನ ಬಿಡುಗಡೆಗೆ ಸರ್ಕಾರ ಅನುಮೋದನೆ ನೀಡಿದೆ.
ರಾಜ್ಯದಲ್ಲಿ ಮೊದಲ ಬಾರಿಗೆ ‘108-ಆರೋಗ್ಯ ಕವಚ’ ಹಾಗೂ ‘104-ಆರೋಗ್ಯ ಸಹಾಯವಾಣಿ’ ಯೋಜನೆಯನ್ನು ಆರೋಗ್ಯ ಇಲಾಖೆ ವತಿಯಿಂದಲೇ ಜಾರಿಗೊಳಿಸುತ್ತಿದ್ದು, ಇದಕ್ಕೆ ಅಗತ್ಯವಿರುವ 3,691 ಸಿಬ್ಬಂದಿಯನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ಅಡಿ ಪಡೆಯಲು ಮಂಜೂರಾತಿ ನೀಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಕುರಿತ ಹೇಳಿಕೆಗಾಗಿ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ವಿರುದ್ಧ ಸಾಮಾಜಿಕ ಜಾಲಾತಾಣಗಳಲ್ಲಿ ಅವಹೇಳನಕಾರಿ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಬಂಧಿತ ಆರು ಮಂದಿಗೆ ಜಾಮೀನು ಮತ್ತು ಓರ್ವ ಆರೋಪಿಗೆ ನಿರೀಕ್ಷಣಾ ಜಾಮಿನು ಮಂಜೂರು ಮಾಡಿ ಹೈಕೋರ್ಟ್ ಆದೇಶಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯಿಂದ ಐದು ಮಹಾನಗರ ಪಾಲಿಕೆಗಳು ನೆಗೆದು ಬಿದ್ದುಹೋಗಿವೆ. ಎಲ್ಲಾ ಅಧಿಕಾರಗಳನ್ನು ಕೇವಲ ಮುಖ್ಯಮಂತ್ರಿಗೆ ನೀಡಲಾಗಿದೆ. ಇದು ಸಂವಿಧಾನ ವಿರೋಧಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘದ ಸಿಬ್ಬಂದಿ ಸಹ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ ಬರಲಿದ್ದಾರೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಬೆಂಗಳೂರು ನಗರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಕಾರ್ಯಕ್ಕೆ ಅನೇಕ ಬಟವಾಡೆ ಅಧಿಕಾರಿಗಳನ್ನೂ ನಿಯೋಜಿಸಿರುವ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಇಲಾಖೆಗಳ ಸಾವಿರಾರು ಸರ್ಕಾರಿ ನೌಕರರಿಗೆ ವೇತನ ವಿಳಂಬವಾಗಿದೆ.
ದಿ ಆರ್ಟ್ ಆಫ್ ಲಿವ್ಹಿಂಗ್ ಅಂತಾರಾಷ್ಟ್ರೀಯ ಕೇಂದ್ರವು ಸುವರ್ಣಮುಖಿ ನದಿ ಪುನರುಜ್ಜೀವನದ ಉದ್ದೇಶದಿಂದ ಆಯೋಜಿಸಿದ್ದ ಜಾಗೃತಿ ಕಾರ್ಯಾಗಾರವು ಯಶಸ್ವಿಯಾಗಿ ನೆರವೇರಿತು. ರವಿಶಂಕರ್ ಗುರೂಜಿ ನೇತೃತ್ವದಲ್ಲಿ ದಿ ಆರ್ಟ್ ಆಫ್ ಲಿವಿಂಗ್, ಕರ್ನಾಟಕ ಸರ್ಕಾರ ಮತ್ತು ಐಐಎಂ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಾಗಾರ
ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೊದಲ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಬೆಂಗಳೂರಿನಲ್ಲಿ 480 ಕೊಳೆಗೇರಿ ಪ್ರದೇಶಗಳಿದ್ದು, ಅವುಗಳ ಅಭಿವೃದ್ಧಿ ಆಗಬೇಕೆಂದು ಪ್ರಸ್ತಾಪಿಸಿದರು.
ನಿತೇಶ್ ತಿವಾರಿ ನಿರ್ದೇಶನದಲ್ಲಿ ಯಶ್, ರಣಬೀರ್ ಕಪೂರ್ ಮುಖ್ಯಪಾತ್ರದಲ್ಲಿ ನಟಿಸಿರುವ ‘ರಾಮಾಯಣ’ ಸಿನಿಮಾದ ಹಾಡೊಂದರ ರೀರೆಕಾರ್ಡಿಂಗ್ ಬಗ್ಗೆ ಚಿತ್ರ ಸಾಹಿತಿ ಡಾ ಕುಮಾರ್ ವಿಶ್ವಾಸ್ ಭಾವನಾತ್ಮಕವಾಗಿ ವಿವರಿಸಿದ್ದಾರೆ.