ಐಸಿಸಿ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಸೋಮವಾರ ಮಾಜಿ ಚಾಂಪಿಯನ್ ಇಂಗ್ಲೆಂಡ್ ತಂಡ ಬಾಂಗ್ಲಾದೇಶ ವಿರುದ್ಧ ಪ್ರಯಾಸದ ಗೆಲುವು ಸಾಧಿಸಿದೆ. ಸುಲಭ ಗೆಲುವಿನ ವಿಶ್ವಾಸದಲ್ಲಿದ್ದ ಇಂಗ್ಲೆಂಡ್, ಬಾಂಗ್ಲಾ ನೀಡಿದ್ದ 179 ರನ್ಗಳ ಗುರಿಯನ್ನು ಬೆನ್ನತ್ತಲು 46.1 ಓವರ್ ತೆಗೆದುಕೊಂಡಿತು
ದೀಪಾವಳಿ ಮತ್ತು ಛತ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಪೂರ್ವ ಮಧ್ಯ ರೈಲ್ವೆಯು ದಾನಾಪುರ–ಯಶವಂತಪುರ ನಡುವೆ ವೀಕ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಕಾರ್ಯಾಚರಣೆ ಮಾಡುತ್ತಿದೆ.
ಹೆಬ್ಬಾಳ - ಸರ್ಜಾಪುರ ಸಂಪರ್ಕಿಸುವ ನಮ್ಮ ಮೆಟ್ರೋದ 3ಎ ಹಂತಕ್ಕೆ (ಕೆಂಪು ಮಾರ್ಗ) ಜಿಯೋ ಟೆಕ್ನಿಕಲ್ ಇನ್ವೆಸ್ಟಿಗೇಷನ್ ನಡೆಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಮುಂದಾಗಿದೆ.
2025ನೇ ಇಸವಿ ಹಲವು ಹೊಸ ಟೆಕ್ನಾಲಜಿಗಳ ಆವಿಷ್ಕಾರಕ್ಕೆ ನಾಂದಿ ಹಾಡಿದೆ. ಈಗಾಗಲೇ ತಯಾರಾಗಿರುವ, ಈಗ ಸಿದ್ಧಗೊಳ್ಳುತ್ತಿರುವ ಕೆಲವು ಬದುಕು ಬದಲಿಸುವ ಸಾಧ್ಯತೆಯುಳ್ಳ ಆ 5 ಹೊಸ ತಂತ್ರಜ್ಞಾನಗಳ ಪರಿಚಯ ಇಲ್ಲಿದೆ.
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಈ ವರ್ಷ 18,500ಕ್ಕೂ ಅಧಿಕ ಶಿಕ್ಷಕರ ನೇಮಕಾತಿಗೆ ಎಲ್ಲ ಸಿದ್ಧತೆ ನಡೆಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷಾರಂಭದೊಳಗೆ ನೇಮಕಾತಿ ಪೂರ್ಣಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.
ನಾಗರಿಕತೆಯ ತುತ್ತ ತುದಿಯಲ್ಲಿರುವ ನಾವು ರಾಮಾಯಣ ಕಾಲದ ರಾಜಕೀಯ ತತ್ವಗಳನ್ನು ಅಳವಡಿಸಿಕೊಳ್ಳುವ, ಮಾನವೀಯರಾಗಬೇಕಿರುವ ಅಗತ್ಯಗಳನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ.
ಈ ಬಾರಿ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ದಕ್ಷಿಣ ಆಫ್ರಿಕಾ ಮೊದಲ ಗೆಲುವು ಸಾಧಿಸಿದೆ. ಆರಂಭಿಕ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್ ಹೀನಾಯ ಸೋಲು ಕಂಡಿದ್ದ ದ.ಆಫ್ರಿಕಾ, ಸೋಮವಾರ ನ್ಯೂಜಿಲೆಂಡ್ ವಿರುದ್ಧ 6 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ.
ಕೃತಕ ಬುದ್ಧಿಮತ್ತೆ ಅಥವಾ ಚಾಟ್ಜಿಪಿಟಿ ಲೇಖಕನಾಗಿ ನನ್ನ ವೃತ್ತಿಯ ಮೇಲೆ ಪರಿಣಾಮ ಬೀರಲಿದೆಯೇ ಎಂದು ಹಲವರು ಕೇಳುತ್ತಾರೆ. ಅದಕ್ಕೆ ‘ಇಲ್ಲ’ ಎಂಬುದಷ್ಟೇ ನನ್ನ ಉತ್ತರ. ಅದರಲ್ಲೂ ಕಾದಂಬರಿ ಕ್ಷೇತ್ರದಲ್ಲಿ ಇದು ಸಾಧ್ಯವಿಲ್ಲ. ಭಾವನೆಗಳಿಲ್ಲದೆ ಬರವಣಿಗೆ ಎಂದಿಗೂ ಯಶಸ್ವಿಯಾಗದು.
ರಣಜಿ ಟ್ರೋಫಿ ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ಅ.15ರಿಂದ 18ರ ವರೆಗೆ ರಾಜ್ಕೋಟ್ನಲ್ಲಿ ನಡೆಯಲಿರುವ ಸೌರಾಷ್ಟ್ರ ವಿರುದ್ಧ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟಿಸಲಾಗಿದೆ. ಮಯಂಕ್ ಅಗರ್ವಾಲ್ ನಾಯಕತ್ವ ವಹಿಸಲಿದ್ದಾರೆ.
12ನೇ ಆವೃತ್ತಿಯ ಪ್ರೊ ಕಬಡ್ಡಿಯಲ್ಲಿ ದಬಾಂಗ್ ಡೆಲ್ಲಿ ಅಧಿಪತ್ಯ ಮುಂದುವರಿದಿದೆ. ತಂಡ ಆಡಿರುವ 11 ಪಂದ್ಯಗಳ ಪೈಕಿ 10ರಲ್ಲಿ ಜಯಗಳಿಸಿದ್ದು, ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಭದ್ರಪಡಿಸಿಕೊಂಡಿತು.