ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಆದರೆ, ದೇಶದ ಭದ್ರತೆಗೆ ಧಕ್ಕೆ ತಂದಿರುವ ವಿಚಾರದ ಕುರಿತು ಚರ್ಚಿಸಿ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು
-ಕರ್ನಾಟಕದಲ್ಲಿ ಪರಭಾಷಿಕರ ಅಟೋಟಪಕ್ಕೆ ನಮ್ಮ ರಾಜಕಾರಣಿಗಳೇ ಕಾರಣ । ಹಿಂದಿವಾಲಾಗಳ ಮತ್ತು ಕನ್ನಡಿಗರ ನಡುವಿನ ಸಂಘರ್ಷದ ಅಂತ್ಯ: ಕರವೇ ಅಧ್ಯಕ್ಷ
ಉತ್ತರ ಭಾರತೀಯರು ಅದರಲ್ಲೂ ವಿಶೇಷವಾಗಿ ಹಿಂದಿವಾಲಾಗಳು ಕನ್ನಡಿಗರ ಮೇಲೆ ದೌರ್ಜನ್ಯ ಎಸೆಗುತ್ತಿರುವುದಷ್ಟೇ ಅಲ್ಲ, ಕನ್ನಡಿಗರನ್ನು ರಾಷ್ಟ್ರಮಟ್ಟದಲ್ಲಿ ಕೆಟ್ಟದಾಗಿ ಬಿಂಬಿಸುವ ಅತ್ಯಂತ ವ್ಯವಸ್ಥಿತ ಷಡ್ಯಂತ್ರದಲ್ಲಿ ತೊಡಗಿಕೊಂಡಿದ್ದಾರೆ.
ಭಯೋತ್ಪಾದನೆ ಮಟ್ಟಹಾಕಲು ಪ್ರತಿಪಕ್ಷ ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಲಿದೆ. ಈ ವಿಚಾರದಲ್ಲಿ ನಾವು ಯಾವತ್ತೂ ರಾಜಕೀಯ ಮಾಡಿಲ್ಲ.
ಪಹಲ್ಗಾಂ ಉಗ್ರರ ದಾಳಿ ಘಟನೆ ಬಳಿಕ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರ ವಾಪಸ್ ಕರೆತರಲು ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದ ಸಚಿವರ ತಂಡ ಮಂಗಳವಾರದಿಂದಲೇ ಕನ್ನಡಿಗರನ್ನು ಸಂಪರ್ಕಿಸಿ, ಅವರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯದಲ್ಲಿ ನಿರತವಾಗಿದೆ.
ಜಮ್ಮು-ಕಾಶ್ಮೀರದ ಪಹಲ್ಗಾಂನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಹತರಾದ ಕನ್ನಡಿಗರ ಮನೇಲಿ ಈಗ ನೀರವಮೌನ ಆವರಿಸಿದೆ.
25 ಭಾರತೀಯರು ಹಾಗೂ ಓರ್ವ ನೇಪಾಳಿ ಸೇರಿ 26 ಜನರ ಬಲಿ ಪಡೆದ ಜಮ್ಮು-ಕಾಶ್ಮೀರದ ಪಹಲ್ಗಾಂ ಉಗ್ರ ದಾಳಿಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಭಾರತವು ಪಾಕಿಸ್ತಾನದ ವಿರುದ್ಧ ಮೊದಲ ಪ್ರತೀಕಾರ ಕ್ರಮ ಕೈಗೊಂಡಿದೆ. ಇದರ ಭಾಗವಾಗಿ 6 ‘ರಾಜತಾಂತ್ರಿಕ ನಿರ್ಬಂಧ’ಗಳನ್ನು ಹೇರಿದೆ.
ಪ್ರವಾಸಿಗರನ್ನು ಕೈಬೀಸಿ ತನ್ನತ್ತ ಕರೆಯುತ್ತಿದ್ದ ಜಮ್ಮು- ಕಾಶ್ಮೀರದಲ್ಲಿ ಮತ್ತೆ ಉಗ್ರರ ಬಂದೂಕು ಸದ್ದು ಮಾಡಿದ್ದು, 26 ಪ್ರವಾಸಿಗರನ್ನು ಬಲಿ ಪಡೆದಿದೆ. ಇದರ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿದೆ. ಪಾಕ್ ಬೆಂಬಲಿತ ಉಗ್ರರ ವಿರುದ್ಧ ವಿದೇಶಗಳಲ್ಲೂ ಕೂಗು ಎದ್ದಿದೆ.
ಕಾಶ್ಮೀರದ ಪಹಲ್ಗಾಮ್ ದಾಳಿ ವೇಳೆ ಉಗ್ರರು ನನ್ನ ಅಳಿಯ ಭರತ್ ಭೂಷಣ್ನನ್ನು ’ನೀನು ಹಿಂದುನಾ, ಮುಸ್ಲಿಮಾ’ ಎಂದು ಕೇಳಿದ್ದಾರೆ. ಹಿಂದೂ ಎನ್ನುತ್ತಿದ್ದಂತೆ ಆತನ ತಲೆಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಭರತ್ ಭೂಷಣ್ರ ಅತ್ತೆ ವಿಮಲಾ ಕಣ್ಣೀರಿಡುತ್ತಾ ಮಾಹಿತಿ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿ ಐತಿಹಾಸಿಕ ಸಚಿವ ಸಂಪುಟ ಸಭೆ ಗುರುವಾರ ನಡೆಯಲಿದ್ದು, ಚಾಮರಾಜನಗರ ಸೇರಿ ಸುತ್ತಲಿನ ಜಿಲ್ಲೆಗಳಿಗೆ ಸಂಬಂಧಿಸಿದ 25ಕ್ಕೂ ಹೆಚ್ಚು ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆಗಳಿವೆ.