ನೀವೇನಾದರೂ ದಕ್ಷಿಣ ಕನ್ನಡದವರಾಗಿದ್ದರೆ, ಈ ಕತೆಯನ್ನೆಲ್ಲ ನೀವು ಒಂದಲ್ಲ ಒಂದು ಸಲ ಕೇಳಿರುತ್ತೀರಿ. ಹೇಳಿಕೇಳಿ ದಕ್ಷಿಣ ಕನ್ನಡ ಸೀಮೆ ದೈವಗಳ ನಾಡು. ಪ್ರತಿಯೊಂದು ದೈವದ ಕುರಿತೂ ಅಲ್ಲಿ ನೂರಾರು ದಂತಕತೆಗಳೂ ಕಾರಣಿಕದ ಕತೆಗಳೂ ಜನಜನಿತ
ಸಾಮಾಜಿಕ ಹಾಗೂ ಆರ್ಥಿಕ ಗಣತಿ ಹೆಸರಿನಲ್ಲಿ ರಾಜ್ಯದಲ್ಲಿ ಹಿಂದೂಗಳನ್ನು ಮತಾಂತರ ಮಾಡಲು ಪ್ರೋತ್ಸಾಹಿಸುವಂತೆ ಗಣತಿ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಕೇಂದ್ರವೇ ಜಾತಿ ಗಣತಿ ಮಾಡಲು ನಿರ್ಧರಿಸಿದೆ. ಹೀಗಾಗಿ ಜಾತಿ ಗಣತಿಗೆ ನಮ್ಮ ವಿರೋಧವಿಲ್ಲ ಎಂದರು.
ರಾಜ್ಯದ ಸರ್ಕಾರಿ ಸಾರಿಗೆ ಬಸ್ಗಳಲ್ಲಿ 500 ಕೋಟಿ ಉಚಿತ ಪ್ರಯಾಣ ಸೇವೆ ನೀಡಿದ ಕಾರಣಕ್ಕಾಗಿ ಶಕ್ತಿ ಯೋಜನೆ ‘ಅಂತಾರಾಷ್ಟ್ರೀಯ ಬುಕ್ ಆಫ್ ರೆಕಾರ್ಡ್ಸ್-ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್’ಗೆ ಸೇರ್ಪಡೆಯಾಗಿದೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ವಿಚಾರ ಚರ್ಚೆಯಲ್ಲಿಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಹೈಕಮಾಂಡ್ ಎಚ್ಚರಿಕೆ ನಂತರವೂ ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಬದಲಾವಣೆ ಕುರಿತು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ ಶಾಸಕ ಡಾ.ರಂಗನಾಥ್ ಮತ್ತು ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಅವರಿಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಕಾರಣ ಕೇಳಿ ನೋಟಿಸ್ ನೀಡಿದೆ.
ಧರ್ಮ ರಕ್ಷಣೆಗಾಗಿ ಹಿಂದೂಗಳು ತ್ರಿಶೂಲ, ಶಸ್ತ್ರಾಸ್ತ್ರ ಇಟ್ಟುಕೊಳ್ಳುವಂತೆ ಹೇಳುವ ಬಿಜೆಪಿ ನಾಯಕರು ಮೊದಲು ನಿಮ್ಮ ಮನೆ ಮಕ್ಕಳನ್ನು ಧರ್ಮ ರಕ್ಷಣೆಗೆ ಬಿಡಿ. ಆರ್ಎಸ್ಎಸ್ನವರು ಸಹ ಒಂದು ಮ್ಯಾಟ್ರಿಮೋನಿ ಸ್ಥಾಪಿಸಿ ಮದುವೆಯಾಗಿ ಎಂಟು-ಹತ್ತು ಮಕ್ಕಳು ಮಾಡಿಕೊಳ್ಳಿ.
ಅಪಘಾತದಲ್ಲಿ ಮೃತ ಯುವಕ ಅವಿವಾಹಿತ ಎಂಬ ಕಾರಣಕ್ಕೆ ಆತನ ಕುಟುಂಬ ಸದಸ್ಯರಿಗೆ ಅವಲಂಬನೆಯ ನಷ್ಟ ಪರಿಹಾರ ಕಲ್ಪಿಸದ ಅಧೀನ ನ್ಯಾಯಾಲಯದ ಆದೇಶ ಮಾರ್ಪಡಿಸಿರುವ ಹೈಕೋರ್ಟ್, ಕುಟುಂಬದ ಆದಾಯಕ್ಕೆ ಮೃತನೂ ಸಹ ಕೊಡುಗೆ ನೀಡುತ್ತಿದ್ದ ಅಂಶ ಪರಿಗಣಿಸಿ 22.88 ಲಕ್ಷ ರು. ಪರಿಹಾರ ಘೋಷಿಸಿದೆ.
ಜಿಲ್ಲೆಯ ಭೀಮಾ, ಕಾಗಿಣಾ, ಅಮರ್ಜಾ, ಬೆಣ್ಣೆತೊರಾ ನದಿ ತೀರದಲ್ಲಿರುವ 150ಕ್ಕೂ ಅಧಿಕ ಗ್ರಾಮಗಳ 7 ಸಾವಿರದಷ್ಟು ಜನರ ಪಾಲಿಗೆ ಈ ಬಾರಿಯ ನಾಡಹಬ್ಬ ನವರಾತ್ರಿ ನೆರೆ ರಾತ್ರಿಯಾಗಿ ಕಾಡಿತ್ತು!
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ‘ಜಂಬೂಸವಾರಿ’ಯು ಗುರುವಾರ ಹೂ ಮಳೆಯ ನಡುವೆಯು ಅತ್ಯಂತ ಶಿಸ್ತುಬದ್ಧ ಹಾಗೂ ಅದ್ಧೂರಿಯಾಗಿ ನಡೆದು ಲಕ್ಷಾಂತರ ಮಂದಿಯ ಮನಸೂರೆಗೊಂಡಿತು.
ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಆಪ್ತ ಶಾಸಕ ಡಾ. ರಂಗನಾಥ್ ಅವರು ಡಿಕೆಶಿ ಮುಖ್ಯಮಂತ್ರಿ ಆಗಲೆಂದು ನವರಾತ್ರಿಯ 9 ದಿನಗಳ ಕಾಲ ಉಪವಾಸ ವ್ರತ ಮಾಡಿದ್ದಾರೆ.