ಮಹಾರಾಷ್ಟ್ರದ ಥಾಣೆ ನಗರದಲ್ಲಿ ನಿಷೇಧಿತ ಮಾದಕ ವಸ್ತು ಸಾಗಿಸುತ್ತಿದ್ದ ಕಲಬುರಗಿಯ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೇರಿ ಮೂವರನ್ನು ಬಂಧಿಸಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಘಟನೆ ಬೆನ್ನಲ್ಲೇ ಬಂಧಿತ ಮುಖಂಡನನ್ನು ಪಕ್ಷದಿಂದ ಉಚ್ಚಾಟನೆ ಸಹ ಮಾಡಲಾಗಿದೆ.
ಸ್ವಪಕ್ಷೀಯ ಶಾಸಕರೇ ದೂರುಗಳ ಸುರಿಮಳೆ ಸುರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸಚಿವರೊಂದಿಗೆ ದಿಢೀರ್ ‘ಒನ್ ಟು ಒನ್’ ಸಭೆ ಶುರು ಮಾಡಿದ್ದು, ಶಾಸಕರ ದೂರುಗಳ ಕುರಿತು ಸಚಿವರಿಂದ ವಿವರಣೆ ಪಡೆದಿದ್ದಾರೆ.
ಮದುವೆಯಾಗುವ ಭರವಸೆ ನೀಡಿ ಯುವತಿಯೊಂದಿಗೆ ಸಹ ಜೀವನ ನಡೆಸಿದ್ದರಿಂದ ಹುಟ್ಟಿದ ಮಗನಿಗೆ ಜೀವನಾಂಶ ಪಾವತಿಸುವುದಿಲ್ಲ ಎಂದು ಹಠ ಹಿಡಿದಿದ್ದ ಮಾಜಿ ಮುಖ್ಯ ಶಿಕ್ಷಕನಿಗೆ ಕಿವಿ ಹಿಂಡಿರುವ ಹೈಕೋರ್ಟ್
ರಾಜ್ಯದಲ್ಲಿ ಮಳೆ ಮತ್ತೆ ಚುರುಕುಗೊಂಡಿದ್ದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಮ್ಮ ಫಾರೆಸ್ಟ್ ಏರಿಯಾ ಬಾಲ್ಡ್ಹೆಡ್ ಇದ್ದಹಂಗೆ. ರಸ್ತೆ ಇಕ್ಕೆಲದಾಗ ಹಚ್ಚ ಹಸಿರು, ಒಳಗ ಹೊಕ್ಕು ನೋಡಿದ್ರ ಖಾಲಿ. ಥೇಟ್ ನಮ್ಮ ಬೊಕ್ಕತಲೆ ಇದ್ಹಂಗೆ, ಸುತ್ತೆಲ್ಲ ಕೂದಲು, ನಡನೆತ್ತಿ ಭಣಭಣ!
ಪ್ರತಿಯೊಬ್ಬ ರಾಜಕೀಯ ಪ್ರತಿನಿಧಿಯ ಬದುಕಿನಲ್ಲಿ ಕೆಲವೊಂದು ಕ್ಷಣಗಳು ಅಚ್ಚಳಿಯದ ನೆನಪಾಗಿ ಉಳಿಯುತ್ತವೆ. ನಮ್ಮ ಪಾಲಿಗೆ ಅಂಬಾರಗೋಡ್ಲು – ಕಲಸವಳ್ಳಿ – ಸಿಗಂದೂರು ಸೇತುವೆ ನಿರ್ಮಾಣ ಅಂಥದ್ದೊಂದು ಐತಿಹಾಸಿಕ ಸಾಧನೆಯಾಗಿದೆ -ಬಿ.ವೈ. ರಾಘವೇಂದ್ರ
ಜಿಲ್ಲೆಯ ಕಪ್ಪತಗುಡ್ಡ ವನ್ಯಜೀವಿ ಧಾಮದ ಅಂಚಿನ ಗ್ರಾಮಗಳ ಸಮೀಪದಲ್ಲಿ ಕಾಡು ಪ್ರಾಣಿಗಳು ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣ ವರದಿಯಾಗಿದೆ.
ಮುಂದಿನ ಮೂರು ವರ್ಷದಲ್ಲಿ ಬೆಂಗಳೂರು ಹಾಗೂ ಸುತ್ತಲಿನ ನೂರು ಕಿ.ಮೀ. ವ್ಯಾಪ್ತಿಯ ಎಲ್ಲ ಲೆವೆಲ್ ಕ್ರಾಸ್ಗಳನ್ನು ತೆಗೆದು ರಸ್ತೆ ಮೇಲ್ಸೇತುವೆ, ಕೆಳಸೇತುವೆ ನಿರ್ಮಾಣ ಮಾಡಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಆಗಸ್ಟ್ನಲ್ಲಿ ಆರಂಭಿಸುವ ಸಾಧ್ಯತೆ ಇರುವುದರಿಂದ ಸಮಯ, ವೇಳಾಪಟ್ಟಿ ರೂಪಿಸುವುದು ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ ಸವಾಲಾಗಿ ಪರಿಣಮಿಸಿದೆ.
ಸಣ್ಣ ಗಾತ್ರದ ವ್ಯಾಪಾರಿಗಳಿಗೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಎಸ್ಟಿ ತೆರಿಗೆ ನೋಟಿಸ್ಗಳು ಬರುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿನ ಅನೇಕ ವ್ಯಾಪಾರಿಗಳು ಯುಪಿಐ ಮೂಲಕ ಹಣ ಸ್ವೀಕರಿಸುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ.