ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದ (ಕೆಎಸ್ಆರ್ ಮೆಜೆಸ್ಟಿಕ್) ಯಾರ್ಡ್ನಲ್ಲಿ ಮೂಲಸೌಕರ್ಯ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15ರಿಂದ 2026ರ ಜನವರಿ 15ರವರೆಗೆ ರೈಲು ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಬ್ಯಾಟರಾಯನಪುರದಲ್ಲಿರುವ ಗಾಳಿ ಆಂಜನೇಯ ದೇವಸ್ಥಾನದ ಟ್ರಸ್ಟ್ನ ಹಣಕಾಸಿನ ಅವ್ಯವಹಾರ, ಅವ್ಯವಸ್ಥೆ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರದ ವಶಕ್ಕೆ ಪಡೆದು ‘ಘೋಷಿತ ಸಂಸ್ಥೆ’ ಎಂದು ಆದೇಶಿಸಲಾಗಿದೆ.
ಕುಟುಂಬದ ಸಮಸ್ಯೆಯನ್ನು ಹೇಳಿಕೊಂಡು ಪರಿಹರಿಸಿಕೊಳ್ಳಲು ಬಂದ ಮಹಿಳೆ ಮೇಲೆ ಮೌಲ್ವಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭೇಟಿಗೆ ಸಮಯವಕಾಶ ನೀಡದಿರುವುದು ಕುತೂಹಲ ಮೂಡಿಸಿದೆ.
ಬಿಜೆಪಿ ಮುಖಂಡ ಎಲ್.ಕೆ. ಅಡ್ವಾಣಿ ಭೇಟಿಗೂ ಮುನ್ನ ಸಂಭವಿಸಿದ್ದ, 58 ಮಂದಿ ಸಾವಿಗೆ ಕಾರಣವಾಗಿದ್ದ 1998ರ ಕೊಯಮತ್ತೂರು ಬಾಂಬ್ ಸ್ಫೋಟದ ಪ್ರಮುಖ ಆರೋಪಿ, ಉಗ್ರ ಸಾದಿಕ್ ಅಲಿಯಾಸ್ ಟೈಲರ್ ರಾಜಾನನ್ನು ಕರ್ನಾಟಕದ ವಿಜಯಪುರದಲ್ಲಿ ತಮಿಳುನಾಡು ಉಗ್ರ ನಿಗ್ರಹ ಪಡೆ (ಎಟಿಎಸ್) ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಇಂಗ್ಲೆಂಡ್ ಸರಣಿಯ ಆರಂಭಿಕ 2 ಪಂದ್ಯಗಳಲ್ಲೇ ಹಲವು ದಾಖಲೆಗಳನ್ನು ಸೃಷ್ಟಿಸಿರುವ ಭಾರತದ ಯುವ ನಾಯಕ ಶುಭ್ಮನ್ ಗಿಲ್ ರನ್ ಪ್ರವಾಹವನ್ನೇ ಹರಿಸುವ ಮುನ್ಸೂಚನೆ ನೀಡಿದ್ದಾರೆ
ದುಲ್ಕರ್ ಸಲ್ಮಾನ್ ನಟನೆಯ ‘ಲಕ್ಕಿ ಭಾಸ್ಕರ್’ ಹಾಗೂ ನಾನಿ ಅಭಿನಯದ ‘ಜೆರ್ಸಿ’ ಚಿತ್ರಗಳನ್ನು ನಿರ್ಮಿಸಿದ್ದ ಸಿತಾರಾ ಎಂಟರ್ಟೇನ್ಮೆಂಟ್ ನಿರ್ಮಾಣದಲ್ಲಿ ರಿಷಬ್ ಶೆಟ್ಟಿ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ.
ಯಶ್ ನಟನೆಯ ‘ರಾಮಾಯಣ’ ಗ್ಲಿಂಪ್ಸ್ಗೆ ಜಗತ್ತಿನಾದ್ಯಂತ ಮೆಚ್ಚುಗೆ ಹರಿದುಬಂದಿದೆ. ಆದರೆ ಅದಕ್ಕೂ ಹೆಚ್ಚಾಗಿ ಈ ಸಿನಿಮಾ ನಿರ್ಮಿಸುತ್ತಿರುವ ಪ್ರೈಮ್ ಫೋಕಸ್ ಸಂಸ್ಥೆ ಸಿನಿಮಾ ರಿಲೀಸ್ಗೂ ಮೊದಲೇ ದಾಖಲೆಯ 1000 ಕೋಟಿ ರು. ಗಳಿಕೆ ಮಾಡಿ ಹೆಮ್ಮೆಯಿಂದ ಬೀಗುತ್ತಿದೆ.
ರಾಜ್ಯ ವಕ್ಫ್ ಮಂಡಳಿಗೆ ಸೇರಿದ ನಾಲ್ಕು ಕೋಟಿ ರು. ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ)ವು ಜಪ್ತಿ ಮಾಡಿದ್ದ 3.82 ಕೋಟಿ ರು. ಮೌಲ್ಯದ ಆಸ್ತಿಯನ್ನು ರಾಜ್ಯ ವಕ್ಫ್ ಮಂಡಳಿಗೆ ಹಸ್ತಾಂತರಿಸಿದೆ.
ರಾಜ್ಯದಲ್ಲಿ ಪಕ್ಷ ಸಂಘಟನೆಗಾಗಿ 58 ದಿನಗಳ ಕಾಲ ‘ಜನರೊಂದಿಗೆ ಜನತಾದಳ’ ಹೆಸರಿನಲ್ಲಿ ರಾಜ್ಯ ಪ್ರವಾಸ ಕೈಗೊಂಡಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರದಿಂದ ಐದು ದಿನ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ.