ಏನಿದು ಸಭಾಧ್ಯಕ್ಷರೇ?, ಸದನದಲ್ಲಿ ಎಲ್ಲದಕ್ಕೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಇಬ್ಬರೇ ಉತ್ತರಿಸುತ್ತಾರೆ. ಇದು ಒಂದು ರೀತಿ ‘ಊರಿಗೊಬ್ಬಳೇ ಪದ್ಮಾವತಿ’ ಕಥೆ ಆಗಿದೆ ಎಂದು ಅಬ್ಬರಿಸಿದರು.
ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಹೆಚ್ಚಿಸುವ ದೃಷ್ಟಿಯಿಂದ 2023-24ರಲ್ಲಿ ಜಾರಿಗೆ ತಂದ ವರ್ಷಕ್ಕೆ ಮೂರೂ ಪರೀಕ್ಷೆ ನಡೆಸುವ ಪ್ರಯೋಗ ಸತತ 2ನೇ ವರ್ಷವೂ ಫಲಿತಾಂಶ ಕುಸಿತದೊಂದಿಗೆ ವಿಫಲವಾಗಿದೆ. ಇದರಿಂದ ಈ ಮೂರು ಪರೀಕ್ಷೆ ಅಗತ್ಯ ಬಗ್ಗೆಯೇ ಪ್ರಶ್ನೆ ಹುಟ್ಟುವಂತೆ ಮಾಡಿದೆ.
ಬೃಹತ್ ಪ್ರಮಾಣದಲ್ಲಿ ಬಾಕಿಯಿರುವ ಹಳೇ ವ್ಯಾಜ್ಯಗಳ ವಿಲೇವಾರಿಗೆ ಸಂಜೆ ಕೋರ್ಟ್ ಆರಂಭಿಸುವ ಕೇಂದ್ರ ಸರ್ಕಾರದ ಉದ್ದೇಶಿತ ಯೋಜನೆಗೆ ಕರ್ನಾಟಕದ ಹಲವು ವಕೀಲರ ಸಂಘಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ.
ಪರಿಸರದ ಮಹತ್ವ, ಅಗತ್ಯತೆ ಮತ್ತು ಸಂರಕ್ಷಣೆ ಕುರಿತಂತೆ ಉಚ್ಚ ನ್ಯಾಯಾಲಯದ ಐವರು ನ್ಯಾಯಮೂರ್ತಿಗಳು ಮತ್ತು ರಾಜ್ಯದ ಇಬ್ಬರು ಉಪ ಲೋಕಾಯುಕ್ತರು ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಭಾನುವಾರ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಸಂದೇಶ ಸಾರಿದರು.
ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ವ್ಯಕ್ತಿಯೊಬ್ಬರ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಜಮೀನು ಖಾಲಿ ಮಾಡುವಂತೆ ಧಮಕಿ ಹಾಕಿ ಜೀವ ಬೆದರಿಕೆ - ಚಿತ್ರ ನಿರ್ಮಾಪಕ ಹಾಗೂ ಆತನ ಸಹಚರರ ವಿರುದ್ಧ ಪ್ರಕರಣ
ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮಾಲೀಕರು ಕೂಡಲೇ ದುರಸ್ಥಿ ಮಾಡಿಕೊಳ್ಳಬೇಕು
ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್ಬಾಗ್ನ ಗಾಜಿನಮನೆಯಲ್ಲಿ ಕಳೆದ 11 ದಿನಗಳಿಂದ ನಡೆಯುತ್ತಿದ್ದ ‘ವೀರ ರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಸೋಮವಾರ ತೆರೆ ಬೀಳಲಿದೆ.
ಹಳದಿ ಮಾರ್ಗದ ಬಳಿಕ ಇದೀಗ ವಿಳಂಬ ಆಗಿರುವ ನಾಗವಾರ-ಕಾಳೇನ ಅಗ್ರಹಾರ ‘ಗುಲಾಬಿ’ ಮಾರ್ಗವನ್ನು ನಿಗದಿತ ವೇಳೆಗೆ ಆರಂಭಿಸಲು ಹಾಗೂ ಮುಖ್ಯವಾಗಿ ಅಗತ್ಯ ರೈಲುಗಳನ್ನು ಪೂರೈಸಿಕೊಳ್ಳಲು ನಗರ ಸಾರಿಗೆ ತಜ್ಞರು ಒತ್ತಾಯಿಸಿದ್ದಾರೆ.
ಮಗು ಆಟವಾಡುವಾಗ ಎದುರು ಮನೆಯ ಬಕೆಟ್ ನೀರು ಮುಟ್ಟಿದ ವಿಚಾರಕ್ಕೆ ಮಗುವಿನ ಪೋಷಕರೊಂದಿಗೆ ಜಗಳ ತೆಗೆದು ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್ಗಳಿಂದ ಅಮಾನುಷವಾಗಿ ಹಲ್ಲೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಭರ್ಜರಿ ಮಳೆ ಸುರಿದಿದೆ. ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಹಾಸನ, ಕೋಲಾರ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸಿದೆ. ಇದರಿಂದ ನದಿಗಳು ತುಂಬಿ ಹರಿಯುತ್ತಿದ್ದು, ಅಣೆಕಟ್ಟೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.