ಪೂಜ್ಯರು ಮಠದ ಆರ್ಥಿಕತೆಗಿಂತ ಅಡುಗೆ ಉಗ್ರಾಣದಲ್ಲಿರುವ ಅಕ್ಕಿಬೇಳೆಗಳ ಕಡೆಗೆ ಸದಾ ಗಮನ. ಏಕೆಂದರೆ, ಹಸಿದ ಹೊಟ್ಟೆಗೆ ಶಿವ ಭಕ್ತಿ ತಲುಪದು ಎಂಬುದು ಅವರ ನಿಲುವಾಗಿತ್ತು. ಹಾಗಾಗಿ ನಾವು ಅವರ ದಾಸೋಹ ಪ್ರಜ್ಞೆಯನ್ನು ಅನುಸರಿಸಬೇಕು. ನಮ್ಮ ಜೀವನದಲ್ಲಿ ಹಸಿದ ಹೊಟ್ಟೆಗಳಿಗೆ ಉಣಬಡಿಸಿ ಪುಣ್ಯದ ಪಾಲು ಪಡೆಯಬೇಕು.
ದುಬೈನಿಂದ ಚಿನ್ನ ಸಾಗಿಸುವ ಮುನ್ನ ತನ್ನ ಗೆಳೆಯ ಹಾಗೂ ಬಳ್ಳಾರಿ ಚಿನ್ನದ ವ್ಯಾಪಾರಿ ಸಾಹಿಲ್ ಸಕಾರಿಯಾ ಜೈನ್ಗೆ ನಟಿ ರನ್ಯಾ ರಾವ್ ಅವರು ವಾಟ್ಸಪ್ನಲ್ಲಿ ಮೆಸೇಜ್ ಮಾಡಿದ್ದರು ಎಂಬ ಸಂಗತಿ ಡಿಆರ್ಐ ತನಿಖೆಯಲ್ಲಿ ಪತ್ತೆಯಾಗಿದೆ.
ಮಂಗಳವಾರದಿಂದ ಹಾಲು, ಮೊಸರಿನ ದರ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಹೋಟೆಲ್ಗಳಲ್ಲಿ ಚಹ, ಕಾಫಿ ಸೇರಿದಂತೆ ಹಾಲಿನ ಖಾದ್ಯ, ಸಿಹಿ ತಿನಿಸುಗಳ ಬೆಲೆಯಲ್ಲೂ ಏರಿಕೆಯಾಗಲಿದೆ.
ಬಿಸಿಲಿನ ಬೇಗೆಯ ನಡುವೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಜವಹಾರ್ಲಾಲ್ ನೆಹರು ತಾರಾಲಯದ ಸ್ಕೈ ಥಿಯೇಟರ್ ಪ್ರವೇಶ ಶುಲ್ಕವೂ ಶೇ.25ರಷ್ಟು ಹೆಚ್ಚಳವಾಗಿದೆ. ವಯಸ್ಕರ ಪ್ರವೇಶಕ್ಕೆ ಹಾಲಿ ದರ ₹75 ರಿಂದ ₹100ಕ್ಕೆ ಏರಿಕೆಯಾಗಿದ್ದು, ಪರಿಷ್ಕೃತ ದರ ಏ.1ರಿಂದಲೇ ಜಾರಿಗೆ ಬರಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.2ರಂದು ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಲು ಅನುವಾಗುತ್ತಿದ್ದಂತೆಯೇ ಕಾಂಗ್ರೆಸ್ನಲ್ಲಿ ವಿಧಾನಪರಿಷತ್ ಸ್ಥಾನಾಕಾಂಕ್ಷಿಗಳ ಲಾಬಿ ಮೇರೆ ಮೀರಿದೆ. ಲಭ್ಯವಿರುವ ನಾಲ್ಕು ಸ್ಥಾನಗಳಿಗೆ 40ಕ್ಕೂ ಹೆಚ್ಚು ಮಂದಿ ಪೈಪೋಟಿ ನಡೆಸಿದ್ದಾರೆ.
ರಾಜೇಂದ್ರ ಅವರ ಹತ್ಯೆ ಸುಪಾರಿ ಪ್ರಕರಣದ ತನಿಖೆ ಚುರುಕುಗೊಂಡಿದೆ. ರಾಜೇಂದ್ರ ಹತ್ಯೆಗೆ ರೌಡಿ ಶೀಟರ್ ಸೋಮು ಎಂಬಾತ ಸಂಚು ನಡೆಸಿದ್ದ ಬಗ್ಗೆ ಪ್ರಕರಣದ ಇತರ ಆರೋಪಿಗಳಾದ ರಾಕಿ ಹಾಗೂ ಪುಷ್ಪಾ ಎಂಬುವರು ಮಾತುಕತೆ ನಡೆಸಿದ್ದ 18 ನಿಮಿಷದ ಸ್ಫೋಟಕ ಆಡಿಯೋ ಬಹಿರಂಗವಾಗಿದೆ.
ಹನಿಟ್ರ್ಯಾಪ್ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಮಂಗಳವಾರ ಅಥವಾ ಬುಧವಾರ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಜನರು ಹೊಸ ಪಕ್ಷ ಕಟ್ಟಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಶೀಘ್ರವೇ ರಾಜ್ಯಾದ್ಯಂತ ಸುತ್ತಾಡಿ ಜನಾಭಿಪ್ರಾಯ ಸಂಗ್ರಹಿಸಿ ಹೊಸ ಪಕ್ಷ ಕಟ್ಟುವ ಕುರಿತು ವಿಜಯದಶಮಿಗೆ ರಾಜಕೀಯ ನಿರ್ಧಾರ ಕೈಗೊಳ್ಳುವೆ’ ಎಂದು ಬಿಜೆಪಿ ಉಚ್ಚಾಟಿತ ನಾಯಕ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಘೋಷಿಸಿದ್ದಾರೆ.
ವಿವಿಧ ಅಗತ್ಯ ಸೇವೆಗಳು, ಪದಾರ್ಥಗಳ ಬೆಲೆ ಏರಿಕೆ ಹಾಗೂ ತನ್ನ 18 ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಿದ ಸ್ಪೀಕರ್ ಕ್ರಮ ವಿರೋಧಿಸಿ ಪ್ರತಿಪಕ್ಷ ಬಿಜೆಪಿ ಬುಧವಾರದಿಂದ ರಾಜ್ಯ ಸರ್ಕಾರದ ವಿರುದ್ಧ ಸರಣಿ ಹೋರಾಟ ಆರಂಭಿಸಲಿದೆ.