ವಿದೇಶಗಳ ಕೌಶಲಯುತ ನೌಕರರು ಅಮೆರಿಕಕ್ಕೆ ಬಂದು, ಅಮೆರಿಕನ್ನರಿಗೆ ತರಬೇತಿ ನೀಡಿ ತಮ್ಮ ದೇಶಕ್ಕೆ ಹಿಂದಿರುಗಬೇಕು. ಅಮೆರಿಕನ್ನರ ಉದ್ಯೋಗಗಳನ್ನು ಅವರು ಕಸಿದುಕೊಳ್ಳಲು ಸಾಧ್ಯವಿಲ್ಲ’ ಎಂದು ಅಮೆರಿಕದ ವಿತ್ತ ಸಚಿವ ಸ್ಕಾಟ್ ಬೆಸೆಂಟ್ ಹೇಳಿಕೆ ನೀಡಿದ್ದಾರೆ
ಕೆಂಪುಕೋಟೆ ಬಳಿಯ ಸ್ಫೋಟ ಪ್ರಕರಣದಲ್ಲಿ ಬಲಿಯಾದ ಆತ್ಮಾಹುತಿ ದಾಳಿಕೋರನ ಸಹಚರರನ್ನು, ಭಾರೀ ದೊಡ್ಡ ಸಂಚಿಗೂ ಮೊದಲೇ ಬಂಧಿಸಿ ಬಹುದೊಡ್ಡ ಅನಾಹುತವನ್ನು ತಡೆದದ್ದು ಶ್ರೀನಗರದ ಒಬ್ಬ ಪೊಲೀಸ್ ಅಧಿಕಾರಿಯ ಜಾಣ್ಮೆ ಎಂದು ತಿಳಿದುಬಂದಿದೆ.
ದೆಹಲಿಯಲ್ಲಿ ಸೋಮವಾರ ಸಂಜೆ ಕಾರು ಸ್ಫೋಟಗೊಳ್ಳುತ್ತಿದ್ದಂತೆ ದೇಹಗಳು ಗೋಡೆಗೆ ಅಪ್ಪಳಿಸಿವೆ. ಸತ್ತವರ ಶ್ವಾಸಕೋಶ ಛಿದ್ರಛಿದ್ರವಾಗಿದ್ದು, ಕಿವಿಗಳು ಜರ್ಜರಿತವಾಗಿತ್ತು ಎಂಬ ಅಂಶ ಮರಣೋತ್ತರ ಪರೀಕ್ಷೆಯಲ್ಲಿ ಉಲ್ಲೇಖವಾಗಿದೆ, ಇದು ದುರಂತದ ಭಯಾನಕತೆಗೆ ಸಾಕ್ಷಿ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಗದ್ದಲದಿಂದಾಗಿ ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆ ಮತಎಣಿಕೆ ಶುಕ್ರವಾರ ನಡೆಯಲಿದೆ. ಈ ಮೂಲಕ ಕಾತರಕ್ಕೆ ತೆರೆಬೀಳಲಿದೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಸೇರಿ ವಿಶೇಷ ಸವಲತ್ತು ಪಡೆದ ಆರೋಪ ಹೊತ್ತಿರುವ ನಾಲ್ವರು ಕೈದಿಗಳನ್ನು ಪೊಲೀಸರು ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಚಿತ್ರದ ಆಡಿಯೋ ಬಿಡುಗಡೆ ಜೊತೆಗೆ ಅದ್ದೂರಿಯಾಗಿ ಕೊರಗಜ್ಜನ ಕೋಲ ಸೇವೆಯೂ ನಡೆಯಿತು. ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲು ಆಡಿಯೋ ಬಿಡುಗಡೆ ನಂತರ ಇಲ್ಲಿನ ಮಾರ್ನಮಿಕಟ್ಟೆಯಲ್ಲಿ ಕೋಲ ಸೇವೆ ನಡೆಯಿತು
ರಜನಿಕಾಂತ್ ನಟನೆಯ ಬಹುನಿರೀಕ್ಷಿತ ‘ಜೈಲರ್ 2’ ಚಿತ್ರದಲ್ಲಿ ನಟಿ ಮೇಘನಾ ರಾಜ್ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಮೇಘನಾ ರಾಜ್ ಅವರು ಈಗಾಗಲೇ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಅವರ ಪಾತ್ರ ಯಾವುದು ಎನ್ನುವುದು ತಿಳಿದುಬಂದಿಲ್ಲ.
ಜೂ.4ರಂದು ಸಂಭವಿಸಿದ ಭೀಕರ ಕಾಲ್ತುಳಿತದ ಬಳಿಕ ಹಲವು ಮಹತ್ವದ ಟೂರ್ನಿಗಳ ಆತಿಥ್ಯ ತಪ್ಪಿಸಿಕೊಂಡಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮುಂದಿನ ಐಪಿಎಲ್ ಪಂದ್ಯಗಳೂ ಎತ್ತಂಗಡಿಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಕಳೆದ ವರ್ಷ ಅಕ್ಟೋಬರ್-ನವೆಂಬರ್ನಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ತವರಿನ ಟೆಸ್ಟ್ ಸರಣಿಯಲ್ಲಿ ಹೀನಾಯವಾಗಿ ಸೋತು, ಭಾರೀ ಮುಖಭಂಗ ಅನುಭವಿಸಿತ್ತು. ತವರಿನ ಪಿಚ್ನಲ್ಲಿ, ಅದರಲ್ಲೂ ಸ್ಪಿನ್ ಪಿಚ್ನಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದ ಭಾರತವನ್ನು ಕಿವೀಸ್ ಇನ್ನಿಲ್ಲದಂತೆ ಕಾಡಿತ್ತು
ಇತ್ತೀಚಿನ ದಿನಗಳಲ್ಲಿ ವಲಸಿಗರ ಸ್ವರ್ಗವಾಗುತ್ತಿರುವ ಬೆಂಗಳೂರು ಸಹ ವಾಯು ಮಾಲಿನ್ಯದಲ್ಲಿ 2ನೇ ದೆಹಲಿ ಆಗುತ್ತಿದ್ದು, ನಗರದ ಹಲವೆಡೆ ವಾಯು ಗುಣಮಟ್ಟ ಹದಗೆಡತೊಡಗಿದೆ ಎಂಬುದನ್ನು ಸಾಬೀತುಪಡಿಸುತ್ತಿದೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ-ಅಂಶಗಳು.