ನಟಿ ಭಾವನಾ ರಾಮಣ್ಣ ಅವರು ಹೆಣ್ಣು ಮಗುವಿನ ತಾಯಿ ಆಗಿದ್ದಾರೆ. ಒಂದು ವಾರದ ಹಿಂದೆಯೇ ಅವರಿಗೆ ಹೆರಿಗೆ ಆಗಿದ್ದು, ಗರ್ಭಾವಸ್ಥೆಯಲ್ಲಿ ಸಮಸ್ಯೆಯಿದ್ದ ಕಾರಣ ಎಂಟನೇ ತಿಂಗಳಲ್ಲೇ ಹೆರಿಗೆ ಮಾಡಲಾಗಿದೆ ಎನ್ನಲಾಗಿದೆ
ರಾಜ್ಯದ ಸರ್ಕಾರಿ ಸಾರಿಗೆ ವ್ಯವಸ್ಥೆ ಮತ್ತಷ್ಟು ಪರಿಸರ ಸ್ನೇಹಿಯಾಗುವತ್ತ ಸಾಗುತ್ತಿದ್ದು, ಮುಂದಿನ ಕೆಲ ತಿಂಗಳಲ್ಲಿ ನಾಲ್ಕೂ ನಿಗಮಗಳಿಗೆ 5 ಸಾವಿರಕ್ಕೂ ಹೆಚ್ಚಿನ ಎಲೆಕ್ಟ್ರಿಕ್ ಬಸ್ಗಳು ಸೇರ್ಪಡೆಯಾಗುತ್ತಿವೆ.
ಅತ್ಯಾ*ರ ಪ್ರಕರಣದಲ್ಲಿ ಜೈಲು ಸೇರಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಗ್ರಂಥಾ ಲಯದ ಸಹಾಯಕ.
ಖಗೋಳದ ಅಪರೂಪದ ಮತ್ತು ಅಪೂರ್ವವಾದ ವಿದ್ಯಮಾನ ಖಗ್ರಾಸ ಚಂದ್ರ ಗ್ರಹಣ ಸೆ.7ರ ರಾತ್ರಿ ಜರುಗಲಿದ್ದು, ಚಂದಿರನು ರಕ್ತ ವರ್ಣ/ತಾಮ್ರ ವರ್ಣದಲ್ಲಿ ಕಾಣಿಸಲಿದ್ದಾನೆ.
‘ರಾಜಕೀಯ ದುರುದ್ದೇಶದಿಂದ ಬಾನು ಮುಷ್ತಾಕ್ ಅವರು ನಾಡಹಬ್ಬ ಉದ್ಘಾಟಿಸುವುದನ್ನು ಬಿಜೆಪಿಯವರು ವಿರೋಧಿಸುತ್ತಿದ್ದಾರೆ. ಸರ್ಕಾರ ರಾಜಕೀಯವಾಗಿ ಉತ್ತರ ನೀಡುವ ಜತೆಗೆ ಕೋರ್ಟಿನಲ್ಲೂ ಪ್ರತ್ಯುತ್ತರ ನೀಡಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರಿಗೆ ನೀಡಿರುವ ಆಹ್ವಾನ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಆನ್ಲೈನ್ ಬೆಟ್ಟಿಂಗ್ ಹಾಗೂ ಮನಿ ಗೇಮಿಂಗ್ ಹಗರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) 3ನೇ ಬಾರಿಗೆ ದಾಳಿ ಮಾಡಿದೆ.
ಚಿನ್ನಯ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಬುರಡೆಯನ್ನು ನೇತ್ರಾವತಿ ಸ್ನಾನಘಟ್ಟ ಸಮೀಪದ ಅರಣ್ಯದ ಬಂಗ್ಲೆಗುಡ್ಡದಿಂದ ತಾನೇ ತೆಗೆದುಕೊಂಡು ಹೋಗಿ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ಗೆ ಕೊಟ್ಟಿದ್ದೆ ಎಂದು ಸೌಜನ್ಯ ಮಾವ ವಿಠಲಗೌಡ ಎಸ್ಐಟಿ ಮುಂದೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.
ದೆಹಲಿ ಹೈಕೋರ್ಟ್ ನ್ಯಾಯಾಧೀಶರಾಗಿದ್ದ ನ್ಯಾ। ಯಶವಂತ್ ವರ್ಮಾ ವಿರುದ್ಧ ವಾಗ್ದಂಡನೆ ಪೂರ್ವ ತನಿಖೆಗೆ ನೇಮಿಸಲಾಗಿರುವ ತ್ರಿಸದಸ್ಯ ತಂಡಕ್ಕೆ ಕರ್ನಾಟಕ- ಗೋವಾ ವಲಯದ ಪ್ರಧಾನ ಮುಖ್ಯ ಆದಾಯ ತೆರಿಗೆ ಆಯುಕ್ತರಾಗಿದ್ದ ಕನ್ನಡಿಗ ಗಣಪತಿ ಭಟ್ ಅವರನ್ನು ಕಾರ್ಯದರ್ಶಿಯಾಗಿ ನೇಮಕ
ರಷ್ಯಾ ತೈಲ ಖರೀದಿ ವಿಷಯದಲ್ಲಿ ಹಾಗೂ ಶೇ.50 ಪ್ರತೀಕಾರ ತೆರಿಗೆ ಹೇರಿಕೆ ವಿಚಾರದಲ್ಲಿ ಕಳೆದ 3 ತಿಂಗಳಿನಿಂದ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸತತ ವಾಗ್ದಾಳಿ ನಡೆಸುತ್ತಲೇ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿಢೀರ್ ಮೆತ್ತಗಾಗಿದ್ದಾರೆ.