ಗಣೇಶ ಚತುರ್ಥಿಯಂದು ಮೋದಕವನ್ನು ನೈವೇದ್ಯವಾಗಿ ಏಕೆ ಅರ್ಪಿಸಲಾಗುತ್ತದೆ ಎಂಬುದರ ಹಿಂದಿನ ಪೌರಾಣಿಕ ಕಥೆ ಮತ್ತು ಮೋದಕದ ಮಹತ್ವವನ್ನು ಈ ಲೇಖನವು ವಿವರಿಸುತ್ತದೆ. ವಿವಿಧ ರಾಜ್ಯಗಳಲ್ಲಿ ಮೋದಕವನ್ನು ಏನೆಂದು ಕರೆಯುತ್ತಾರೆ ಮತ್ತು ಅದರ ವಿವಿಧ ರೂಪಗಳ ಬಗ್ಗೆಯೂ ತಿಳಿಯಿರಿ
ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಸೈಯ್ಯದ್ ನೂರ್ ಎಂಬುವವರು ಸಾಕಿದ ನಾಟಿ ಕೋಳಿಯೊಂದು ನೀಲಿ ಮೊಟ್ಟೆಯನ್ನಿಟ್ಟು ಅಚ್ಚರಿ ಮೂಡಿಸಿದೆ. ನಿತ್ಯ ಬಿಳಿ ಮೊಟ್ಟೆಯನ್ನೇ ಇಡುತ್ತಿದ್ದ ನಾಟಿ ಕೋಳಿ ನೀಲಿ ಮೊಟ್ಟೆಯನ್ನಿಟ್ಟಿದ್ದನ್ನು ಕಂಡು ಸೈಯ್ಯದ್ ನೂರ್ ಅಚ್ಚರಿಗೊಂಡಿದ್ದಾರೆ.
ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಲ್ಲಿ ವಾಟರ್ ಏರೋಡ್ರೋಮ್ ಸ್ಥಾಪಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಉಡಾನ್ ಯೋಜನೆಯಡಿ ಒಟ್ಟು ಏಳು ಸ್ಥಳಗಳನ್ನು ಗುರುತಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳ ತಂಡ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ವೇಳೆ ಮಹತ್ವದ ಸಾಕ್ಷ್ಯ ಲಭ್ಯವಾಗಿದೆ. ಈ ಪೈಕಿ ಚಿನ್ನಯ್ಯ ಅಲಿಯಾಸ್ ಮಾಸ್ಕ್ ಮ್ಯಾನ್ ಮೊಬೈಲ್ ವಶಕ್ಕೆ ಪಡೆಯಲಾಗಿದೆ.
ಪಿತೃಗಳಿಗೆ ಪಿಂಡಪ್ರದಾನ ಮಾಡುವ ಹಿಂದೂಗಳ ಪವಿತ್ರ ಪಿತೃಪಕ್ಷ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಸೆ.6ರಿಂದ 21ರವರೆಗೆ ಗಯಾಜಿ (ಈ ಹಿಂದಿನ ಗಯಾ)ಯಲ್ಲಿ ಇ-ಪಿಂಡದಾನ ಸೇವೆ ಆರಂಭಿಸಲಾಗಿದೆ. ಬಿಹಾರದ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಬಿಎಸ್ಟಿಡಿಸಿ) ಈ ಯೋಜನೆ ಘೋಷಿಸಿದೆ.
ದಸರಾ ಆಚರಣೆಯ ಮುಖ್ಯ ಅತಿಥಿಯಾಗಿ ಉದ್ಘಾಟಿಸುವ ಮೊದಲು ಸಾಹಿತಿ ಬಾನು ಮುಷ್ತಾಕ್ ಅವರು ತಾಯಿ ಭುವನೇಶ್ವರಿ ಮತ್ತು ತಾಯಿ ಚಾಮುಂಡೇಶ್ವರಿ ಬಗ್ಗೆ ತಮಗಿರುವ ಗೌರವ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರು ಬುಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರ ಹೆಸರನ್ನು ಘೋಷಿಸಿದ ಬೆನ್ನಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಮಧ್ಯೆ ರಾಜಕೀಯ ಜಟಾಪಟಿ
ಧರ್ಮಸ್ಥಳ ಗ್ರಾಮದ ಪ್ರಕರಣದ ತನಿಖೆ ನಡೆಯುವ ಮಧ್ಯೆಯೇ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ(ಎಸ್ಐಟಿ) ಸದಸ್ಯ, ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ಅವರು ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ.
ರಾಹುಲ್ ದ್ರಾವಿಡ್ ಬಳಿಕ ಭಾರತ ತಂಡದ ‘ಗೋಡೆ’ಯಾಗಿದ್ದ, ತಮ್ಮ ಕೆಚ್ಚೆದೆಯ ಹೋರಾಟದ ಮೂಲಕವೇ ತಜ್ಞ ಟೆಸ್ಟ್ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದ ಚೇತೇಶ್ವರ ಪೂಜಾರ ಎಲ್ಲಾ ಮಾದರಿ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
‘ದಿ ನ್ಯೂ ಇಂಡಿಯನ್ ಟೈಮ್ಸ್’ ವತಿಯಿಂದ ದಕ್ಷಿಣ ಭಾರತದ ಮಾಧ್ಯಮ ಕ್ಷೇತ್ರದಲ್ಲಿ ಎಲೆಮರೆ ಕಾಯಿಯಂತಿರುವ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.