ನಗರದ ಸೌಂದರ್ಯಕ್ಕೆ ಧಕ್ಕೆ ತಂದ ಆರೋಪದಡಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಎಂಎಲ್ಸಿ ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ವಾಣಿಜ್ಯ ಮಂಡಳಿಗೆ ದೂರು ಕೊಡಲಾಯಿತು, ನಿರ್ಮಾಪಕರ ಸಂಘಕ್ಕೆ ದೂರು ಸಲ್ಲಿಸಲಾಯಿತು ಎಂಬಿತ್ಯಾದಿ ಮಾಹಿತಿಗಳು ಆಗಾಗ ಕೇಳಿಬರುತ್ತವೆ. ಆದರೆ ಆ ದೂರುಗಳು ಎಲ್ಲಿ ಹೋದವು? ಪರಿಹಾರ ಸಿಕ್ಕಿತೇ? ಈ ಕುರಿತು ಒಂದು ಆಸಕ್ತಿಪೂರ್ಣ ವಿಶ್ಲೇಷಣೆ.
ಸ್ಯಾಂಡಲ್ವುಡ್ನ ಸಿನಿಮಾಗಳ ಗಳಿಕೆ ಗಾಬರಿ ಹುಟ್ಟಿಸುವ ಮಟ್ಟಿಗೆ ಕ್ಷೀಣಿಸುತ್ತಿದೆ ಎಂದು ವರದಿಗಳು ಹೇಳುತ್ತಿವೆ. ಸದ್ಯದ ಸ್ಥಿತಿ ನೋಡಿದರೆ ಭಾರತೀಯ ಸಿನಿಮಾದಲ್ಲೇ ‘ಅತೀ ಕಡಿಮೆ ಗಳಿಕೆಯ ಚಿತ್ರರಂಗ’ ಎಂಬ ಬಿರುದು ಸ್ಯಾಂಡಲ್ವುಡ್ಗೆ ಸಲ್ಲುವ ಎಲ್ಲಾ ಲಕ್ಷಣ ಕಾಣುತ್ತಿದೆ.
ಒಂದೆಡೆ ರಚಿತಾರಾಮ್ ಸಿನಿಮಾ ಪ್ರಮೋಶನ್ನಲ್ಲಿ ಭಾಗಿಯಾಗಿಲ್ಲ, ನಮ್ಮ ನಟಿಯರಿಗೆ ನಕರಾ ಜಾಸ್ತಿ ಎಂಬ ಬಗೆಯ ಮಾತುಗಳು ಕೇಳಿಬರುತ್ತಿರುವಾಗ ಸಿನಿಮಾ ಪ್ರಚಾರದಲ್ಲಿ ಭಾಗವಹಿಸುವುದು ಎಷ್ಟು ಮುಖ್ಯ ಎಂಬ ಕುರಿತು ಕೆಲವು ನಟಿಯರು ಹೇಳಿದ್ದಾರೆ.
ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಾಭಿಪ್ರಾಯ ನಿವಾರಿಸುವ ಹಾಗೂ ಮನವೊಲಿಸುವ ಪ್ರಯತ್ನ ಅಧಿಕೃತವಾಗಿ ಆರಂಭ
ರಾಜ್ಯದಲ್ಲಿ ಮಾವು ದರ ಕುಸಿತ, ಮಾವು ಬೆಳೆಗಾರರಿಗೆ ಆಗಿರುವ ನಷ್ಟದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದ್ದು, ಪರಿಹಾರ ನೀಡುವಂತೆ ಕೇಂದ್ರ ಕೃಷಿ ಸಚಿವರೊಂದಿಗೆ ಚರ್ಚಿಸಲು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಒನ್ ವೇನಲ್ಲಿ ಬೈಕ್ನಲ್ಲಿ ಬರುತ್ತಿದ್ದ ಸವಾರನಿಗೆ ಹೀಗೆ ಒನ್ ವೇನಲ್ಲಿ ಬರಬಾರದು ಎಂದು ತಿಳಿ ಹೇಳಿದಕ್ಕೆ ಸವಾರ ತಿರುಗಿ ಜಿಲ್ಲಾಧಿಕಾರಿಗೇ ಬೈದು ಹೋಗಿರುವ ಘಟನೆ ದಾವಣಗೆರೆ ಜಿಲ್ಲೆಯ ಎಸ್.ನಿಜಲಿಂಗಪ್ಪ ಬಡಾವಣೆ ಬಳಿ ಗುರುವಾರ ನಡೆದಿದೆ.
ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ ಕರಡು ಬಗ್ಗೆ ಚರ್ಚಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಧರ್ಮಾಧಾರಿತ ಸರಣಿ ಹತ್ಯೆ-ಕೋಮು ಸಂಘರ್ಷ ಹೆಚ್ಚಲು ಬಿಜೆಪಿ ಮತ್ತು ಸಂಘ ಪರಿವಾರಗಳು ಧಾರ್ಮಿಕ ಭಾವನೆ ಮೇಲೆ ರಾಜಕೀಯ ಮಾಡುತ್ತಿರುವ ಜತೆಗೆ, ಸಂಘರ್ಷಕ್ಕೆ ಎರಡೂ ಧರ್ಮದವರಿಗೆ ವಿದೇಶಗಳಿಂದ ಹಣಕಾಸು ನೆರವು ಸಿಗುತ್ತಿರುವುದೂ ಕಾರಣ
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ದಿಗ್ಗಜ ಕ್ರಿಕೆಟಿಗರ ಅನುಪಸ್ಥಿತಿ ನಡುವೆಯೂ ಹೊಸ ಇತಿಹಾಸ ಸೃಷ್ಟಿಸುವ ಗುರಿ ಇಟ್ಟುಕೊಂಡಿರುವ ಭಾರತ ತಂಡ ಶುಕ್ರವಾರದಿಂದ ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲಿದೆ