ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ವರ್ಷಕ್ಕೆ 1.30 ಕೋಟಿಗೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಕ್ಷೇತ್ರದಲ್ಲಿ ಮೂಲ ಸೌಕರ್ಯ ಒದಗಿಸಲು 230 ಕೋಟಿ ರು.ವೆಚ್ಚದ ಯೋಜನೆಗಳನ್ನು ರೂಪಿಸಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಮೇಲೆ ತಮ್ಮ ವಿರುದ್ಧ ಬ್ರಹ್ಮಾವರ ಠಾಣಾ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಗಣೇಶ ಹಬ್ಬದ ಅಂಗವಾಗಿ ಗಣೇಶ ಮೂರ್ತಿ ವಿಸರ್ಜನೆಗೆ ನಗರದ 41 ಕೆರೆಗಳ ಅಂಗಳದಲ್ಲಿ ತಾತ್ಕಾಲಿಕ ಕಲ್ಯಾಣಿ, 489 ಸಂಚಾರಿ ವಿಸರ್ಜನಾ ವಾಹನಗಳ ವ್ಯವಸ್ಥೆ ಮಾಡಲಾಗಿದೆ.
ನಗರದ ರಸ್ತೆ ಗುಂಡಿಗಳ ಬಗ್ಗೆ ನಮ್ಮ ಮನೆಯವರು, ಸ್ನೇಹಿತರು ಸೇರಿ ಎಲ್ಲರೂ ಬೈಯುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬಿಬಿಎಂಪಿಯ ಶಾಲಾ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿಗೆ ನಿಯೋಜನೆ ಮಾಡಿಕೊಂಡ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಪೈಕಿ 72 ಮಂದಿಯ ನಿಯೋಜನೆಯನ್ನು ರದ್ದುಗೊಳಿಸಲಾಗಿದೆ.
ಗೌರಿ ಮತ್ತು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ನಗರಗಳಿಗೆ ತೆರಳುವ ಜನರ ಸಂಖ್ಯೆ ಹೆಚ್ಚಿರುವ ಕಾರಣ ಕೆಎಸ್ಆರ್ಟಿಸಿಯು 1500 ಹೆಚ್ಚುವರಿ ವಿಶೇಷ ಬಸ್ ಸೇವೆಗಳನ್ನು ಆರಂಭಿಸುವುದಾಗಿ ತಿಳಿಸಿದೆ.
ಅನನ್ಯಾ ಭಟ್ ನಾಪತ್ತೆ ಪ್ರಕರಣ ತಿರುವು ಪಡೆದುಕೊಂಡಿದ್ದು ಈವರೆಗೂ ಅನನ್ಯಾ ಭಟ್ ಅವರ ತಾಯಿ ಎಂದು ಹೇಳಿಕೊಂಡಿದ್ದ ಸುಜಾತಾ ಭಟ್, ಇದೀಗ ಅನನ್ಯ ಭಟ್ ನನ್ನ ಮಗಳಲ್ಲ. ಆದರೆ, ನನ್ನ ಸ್ನೇಹಿತರಾದ ಅರವಿಂದ ಹಾಗೂ ವಿಮಲಾ ಅವರ ಮಗಳಾಗಿದ್ದು, ಅವಳ ಅತ್ಯಾ*ರ ಹಾಗೂ ಕೊಲೆಯಾಗಿದ್ದು ನಿಜ ಎಂದು ಹೇಳಿದ್ದಾರೆ.
ಪ್ರತಿಷ್ಠಿತ ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಸುಜಾತಾ ಭಟ್ ತಪ್ಪೊಪ್ಪಿಕೊಂಡಿದ್ದು, ‘ನನಗೆ ಅನನ್ಯ ಭಟ್ ಎಂಬ ಮಗಳೇ ಇಲ್ಲ. ನಾನು ಈವರೆಗೂ ಹೇಳಿದ್ದೆಲ್ಲವೂ ಸುಳ್ಳು. ನಾನು ಸೃಷ್ಟಿಸಿದ ಕಟ್ಟುಕತೆ. ಗಿರೀಶ್ ಮಟ್ಟಣ್ಣವರ್, ಟಿ. ಜಯಂತ್ ಅವರು ನನಗೆ ಸುಳ್ಳು ಹೇಳುವಂತೆ ಹೇಳಿಕೊಟ್ಟಿದ್ದರು’ ಎಂದು ಹೇಳಿದ್ದಾರೆ.
ಬಿಹಾರದಲ್ಲಿ ಗಂಗಾ ನದಿಗೆ ಅಡ್ಡಲಾಗಿ ನಿರ್ಮಾಣವಾಗಿರುವ ಏಷ್ಯಾದ ಅತಿ ಅಗಲವಾದ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದ್ದಾರೆ.