ರಾಜ್ಯದಲ್ಲಿ ಮಾವಿನ ಹಣ್ಣಿನ ಬೆಲೆ ಕುಸಿದು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ಕುಸಿತ ಪಾವತಿ ಯೋಜನೆ (ಪಿಡಿಪಿಎಸ್) ಅನುಷ್ಠಾನ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ದೇಶದಲ್ಲಿ ಸಂಭವಿಸಿದ ದುರಂತಗಳ ಕುರಿತು ಈ ಮೊದಲೇ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ ನಿಜವಾಗಿದ್ದು, ಅವರು ಹೇಳಿದಂತೆ ರಾಜ್ಯದಲ್ಲಿ ಆರ್ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಹಾಗೂ ಅಹಮದಾಬಾದ್ನಲ್ಲಿ ವಿಮಾನ ದುರ್ಘಟನೆ ಆಗಿ ಅಪಾರ ಸಾವುನೋವು ಆಗಿವೆ.
ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಪರೀಕ್ಷೆ ಬರೆದ 3,15,564 ವಿದ್ಯಾರ್ಥಿಗಳ ಪೈಕಿ 87,330 ಮಂದಿ ಉತ್ತೀರ್ಣರಾಗುವ ಮೂಲಕ ಶೇ.27.67ರಷ್ಟು ಫಲಿತಾಂಶ ದಾಖಲಾಗಿದೆ.
ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿ ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡ ಇನ್ನು 15 ದಿನಗಳಲ್ಲಿ ಅಂತಿಮ ಸ್ಥಳ ನಿಗದಿ ಮಾಡಿ ರಾಜ್ಯ ಸರ್ಕಾರಕ್ಕೆ ವರದಿ ನೀಡುವ ನಿರೀಕ್ಷೆಯಿದೆ
ಪಂಚ ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಎಂದರೆ ಅದು ಶಕ್ತಿ ಯೋಜನೆ. ಯೋಜನೆ ಜಾರಿಗೆ ಬಂದು 2.5 ವರ್ಷ ಕಳೆದರೂ ಇಂದಿಗೂ ಖ್ಯಾತಿಯಲ್ಲಿ ಮೇಲಕ್ಕೇರುತ್ತಲೇ ಇದೆ. ಇದು ನಾರಿ ಸಬಲೀಕರಣಕ್ಕೆ ಪ್ರೇರಣೆಯಾಗಿದೆ. ಈವರೆಗೆ ಒಟ್ಟು 476 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣದ ಸೇವೆ ಪಡೆದಿದ್ದಾರೆ.
ದೆಹಲಿಯಿಂದ ನಗರಕ್ಕೆ ಹೊಸ ಚೂಡಿದಾರ್ ಉಡುಪುಗಳಲ್ಲಿ ಡ್ರಗ್ಸ್ ಅಡಗಿಸಿ ಸಾಗಿಸುತ್ತಿದ್ದ ವಿದೇಶಿ ಯುವತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ 10 ಕೋಟಿ ರು. ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
ಸಸ್ಯಕಾಶಿ ಲಾಲ್ಬಾಗ್ನಲ್ಲಿ ಪ್ರೀ, ಪೋಸ್ಟ್ ವೆಡ್ಡಿಂಗ್ ಶೂಟ್ಸ್, ಬೇಬಿ, ಮಾಡೆಲಿಂಗ್ ಶೂಟ್ಸ್, ರೀಲ್ಸ್-ವೀಡಿಯೋ, ಸಿನಿಮಾ ಚಿತ್ರೀಕರಣಕ್ಕೆ ಕಡಿವಾಣ ಹಾಕಲು ತೋಟಗಾರಿಕೆ ಇಲಾಖೆ ಸಿದ್ಧತೆ ನಡೆಸಿದೆ.
ಗುಜರಾತ್ ವಿಮಾನ ದುರಂತದಲ್ಲಿ ಪವಾಡಸದೃಶವಾಗಿ ಬದುಕುಳಿದ ಏಕೈಕ ಪ್ರಯಾಣಿಕ ವಿಶ್ವಾಸ್ ಕುಮಾರ್ ರಮೇಶ್ ಅಪಘಾತದಿಂದ ತಾವು ಪಾರಾದ ರೀತಿಯನ್ನು ವಿವರಿಸಿದ್ದಾರೆ.
ಗುರುವಾರ ಪತನವಾದ ಏರ್ ಇಂಡಿಯಾ ವಿಮಾನ ಮನೆಗಳಿಗೆ ತೀರಾ ಸಮೀಪದಲ್ಲಿ ಹಾದುಹೋಗಿತ್ತು. ಪೈಲಟ್ ಸಮಯಪ್ರಜ್ಞೆ ತೋರಿದ್ದರಿಂದ ವಸತಿ ಪ್ರದೇಶದಲ್ಲಿದ್ದ ಸುಮಾರು 1,500ರಿಂದ 2,000 ಜನರ ಪ್ರಾಣ ಉಳಿಯಿತು
ಧಾರವಾಡದ ಮಾಜಿ ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲು ಪಾಲಾಗಿದ್ದಾರೆ.