ಸಾವಿಗೀಡಾಗುವ ನವಜಾತ ಶಿಶುಗಳ ತಾಯಂದಿರ ಮರಣ ಪ್ರಮಾಣ ಇಳಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಇಂಥ ಸಾವಿನ ಪ್ರಮಾಣ ಶೂನ್ಯಕ್ಕಿಳಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಒಣಗುತ್ತಿರುವ ಬೆಳೆಗಳ ಸಂರಕ್ಷಿಸಿಕೊಳ್ಳಲು ತುರ್ತಾಗಿ ನಾರಾಯಣಪುರದ ಎಡ-ಬಲದಂಡೆ ಕಾಲುವೆಗಳಿಗೆ ಬಸವಸಾಗರ ಜಲಾಶಯದ ಮೂಲಕ ನೀರು ಹರಿಸುವ ವಿಚಾರ ರಾಜಕೀಯ ಹಗ್ಗಜಗ್ಗಾಟಕ್ಕೆ ಸಾಕ್ಷಿಯಾಗಿದ್ದು, ಆಡಳಿತ ಮತ್ತು ವಿಪಕ್ಷ ನಾಯಕರ ಹೈಡ್ರಾಮಾ ಬಳಿಕ ಕೊನೆಗೂ ನೀರು ಹರಿಸಲು ಸರ್ಕಾರ ಮುಂದಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಶುಕ್ರವಾರ ಮುಕ್ತಾಯಗೊಂಡಿದ್ದು, ಏ.11ರಿಂದ ಮೌಲ್ಯಮಾಪನ ಪ್ರಕ್ರಿಯೆ ಕಾರ್ಯಗಳು ಶುರುವಾಗಲಿವೆ. ರಾಜ್ಯಾದ್ಯಂತ ಸುಮಾರು 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ.
ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್ಡಿಪಿಐನ ನೂರಾರು ಕಾರ್ಯಕರ್ತರು ಹಾಗೂ ಮುಸ್ಲಿಂ ಸಮುದಾಯದವರು ಶುಕ್ರವಾರ ಪ್ರತಿಭಟನೆ ನಡೆಸಿದರು. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ವಕ್ಫ್ ಮಸೂದೆ ಅಸಂವಿಧಾನಿಕ.
ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಬೆಳಗಾವಿಯ ಸುವರ್ಣ ಸೌಧದ ಅವರಣದಲ್ಲಿ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ನಡೆದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ
ತನ್ನ ಮೇಲೆ ರಾಜಕೀಯ ಪ್ರೇರಿತ ಎಫ್ಐಆರ್ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕೊಡಗು ಮೂಲದ ಬಿಜೆಪಿ ಕಾರ್ಯಕರ್ತನೊಬ್ಬ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಮುಂಜಾನೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರು. ಹಗರಣದ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಬೆಂಗಳೂರು ಮತ್ತು ಶಿವಮೊಗ್ಗ ಸೇರಿ 10 ಸ್ಥಳಗಳ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ರನ್ ಹೊಳೆ ಹರಿದ ಶುಕ್ರವಾರದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 12 ರನ್ ವೀರೋಚಿತ ಸೋಲನುಭವಿಸಿದೆ. ಬೌಲಿಂಗ್ ಬಳಿಕ ಬ್ಯಾಟಿಂಗ್ನಲ್ಲೂ ಫೇಲಾದ ಮುಂಬೈ ಟೂರ್ನಿಯಲ್ಲಿ 3ನೇ ಸೋಲುಂಡಿತು. ರಿಷಭ್ ಪಂತ್ ನಾಯಕತ್ವದ ಲಖನೌ 4 ಪಂದ್ಯಗಳಲ್ಲಿ 2ನೇ ಗೆಲುವು ದಾಖಲಿಸಿತು.
ಈ ಬಾರಿ ಐಪಿಎಲ್ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿರುವ ಮುಂಬೈ ಇಂಡಿಯನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಶುಕ್ರವಾರ ಪರಸ್ಪರ ಮುಖಾಮುಖಿಯಾಗಲಿವೆ.
ಭರ್ಜರಿ ವಾಕ್ಸಮರದ ಬಳಿಕ ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ‘ಉಮೀದ್’ ಅಂಗೀಕಾರವಾಗಿದೆ. ಈ ಮಸೂದೆಯನ್ನು ರೂಪಿಸಿದ್ದು ಏಕೆ? ಅದರ ಪ್ರಯೋಜನ ಏನು? ಹಳೆ ಕಾಯ್ದೆಗೂ ಹೊಸ ಶಾಸನಕ್ಕೂ ಏನು ವ್ಯತ್ಯಾಸ ಎಂಬುದರ ಕಿರು ಚಿತ್ರಣ ಇಲ್ಲಿದೆ.