ಸಿದ್ದರಾಮಯ್ಯ ಅವರು ಏ.2ರಂದು ಮೂರು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ವರಿಷ್ಠ ರಾಹುಲ್ ಗಾಂಧಿ ಸೇರಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಹನಿಟ್ರ್ಯಾಪ್ ಪ್ರಕರಣವೂ ಸೇರಿ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಯಲ್ಲಿರುವ ಹಲವು ವಿಚಾರಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ
ಹಂಪಿ ವಿಠ್ಠಲ ಮಂಟಪದಲ್ಲಿನ ಕಲ್ಲಿನ ಕಂಬಗಳನ್ನು ನಿಧಾನವಾಗಿ ತಟ್ಟಿದಾಗ ಸಂಗೀತ ನಾದ ಕೇಳಿ ಬರುವಂತೆಯೇ ಸಂಗೀತ ನಾದ ಮೊಳಗಿಸುವ ಕಲ್ಲುಗಳನ್ನು ಹೊಸಪೇಟೆ ಧರ್ಮಸಾಗರ ಗ್ರಾಮದ ಸಮೀಪದಲ್ಲಿರುವ ದೇವಲಾಪುರದ ಕರೆಕಲ್ಲು ಗುಡ್ಡದಲ್ಲಿ ವಿಜಯನಗರ ತಿರುಗಾಟ ಸಂಶೋಧನಾ ತಂಡ ಪತ್ತೆ ಹಚ್ಚಿದೆ.
ಸೈಬರ್ ಖದೀಮರು ತಾವು ಪೊಲೀಸರೆಂದು ವೃದ್ಧ ದಂಪತಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ಕೊಡದಿದ್ದರೆ ನಿಮ್ಮ ನಗ್ನ ಚಿತ್ರಗಳನ್ನು ವೃರಲ್ ಮಾಡುವುದಾಗಿ ಬೆದರಿಸಿದ ಪರಿಣಾಮ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.
ಬೇನಾಮಿ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ ನಕಲಿ ಚಿನ್ನವನ್ನೇ ಅಡವಿಟ್ಟು ಅದರ ಮೇಲೆ ಸಾಲ ಪಡೆದ ಬ್ಯಾಂಕ್ ವ್ಯವಸ್ಥಾಪಕ 10.97 ಕೋಟಿ ವಂಚಿಸಿರುವ ಘಟನೆ ಶುಕ್ರವಾರ ರಾಯಚೂರಿನಲ್ಲಿ ನಡೆದಿದೆ.
ರಕ್ತದಲ್ಲಿನ ಸಕ್ಕರೆ ಪ್ರಮಾಣ ಅಳೆಯಲು ಸೂಜಿ ಚುಚ್ಚುವ ಸಾಂಪ್ರದಾಯಿಕ ಮಾರ್ಗಕ್ಕೆ ಪರ್ಯಾಯವಾಗಿ ನೋವಿಲ್ಲದೇ, ಅಂಗಾಂಶಕ್ಕೆ ಹಾನಿ ಮಾಡದೆ ‘ಫೋಟೋಅಕೂಸ್ಟಿಕ್ಸ್ ಸೆನ್ಸಿಂಗ್’ ಮೂಲಕ ಸಕ್ಕರೆ ಪ್ರಮಾಣ ಅಳೆಯುವ ಸಂಶೋಧನೆಯನ್ನು ಮಾಡಿದೆ.
ಮೈಸೂರು ವಿಶ್ವವಿದ್ಯಾಲಯದ ನಂತರ ರಾಜ್ಯದಲ್ಲಿ ಎರಡನೇ ಹಳೆಯ ವಿಶ್ವವಿದ್ಯಾಲಯ ಎಂಬ ಖ್ಯಾತಿಯ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಪ್ರಸ್ತುತ ಹೇಳತೀರದ ಆರ್ಥಿಕ ಸಂಕಷ್ಟದಲ್ಲಿದ್ದು, ಬರುವ ಜೂನ್ನಿಂದ ವಿಶ್ವವಿದ್ಯಾಲಯದ 1800 ನಿವೃತ್ತ ನೌಕರರಿಗೆ ಪಿಂಚಣಿ ಸ್ಥಗಿತಗೊಂಡರೂ ಅಚ್ಚರಿ ಇಲ್ಲ!
ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆ ನಿರ್ವಹಣೆಗೆ ಮಧ್ಯ ರೈಲ್ವೆಯು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮುಂಬೈ ಮತ್ತು ಎಸ್ಎಂವಿಟಿ ಬೆಂಗಳೂರು ನಡುವೆ 13 ಟ್ರಿಪ್ಗಳ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಸಂಚರಿಸಲು ನಿರ್ಧರಿಸಿದೆ.
‘ಹೋಟೆಲ್ಗಳಲ್ಲಿ ತಿಂಡಿ, ತಿನಿಸು, ಊಟದ ಬಿಲ್ಗಳ ಮೇಲಿನ ಸೇವಾ ಶುಲ್ಕ (ಸರ್ವೀಸ್ ಚಾರ್ಜ್) ಪಾವತಿಸುವುದು ಗ್ರಾಹಕರಿಗೆ ಕಡ್ಡಾಯವಲ್ಲ. ಅದು ಸ್ವಯಂಪ್ರೇರಿತ. ಹೋಟೆಲ್ಗಳು ಈ ಶುಲ್ಕವನ್ನು ಗ್ರಾಹಕರ ಮೇಲೆ ಕಡ್ಡಾಯವಾಗಿ ವಿಧಿಸುವಂತಿಲ್ಲ’ ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.
ಹನಿಟ್ರ್ಯಾಪ್ ಯತ್ನ ಪ್ರಕರಣ ಸಂಬಂಧದ ವಿಚಾರಣೆಗೆ ಯುಗಾದಿ ಹಬ್ಬದ ನಂತರ ಹಾಜರಾಗುವುದಾಗಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಸಿಐಡಿ ಅಧಿಕಾರಿಗಳಿಗೆ ವಿನಂತಿಸಿದ್ದಾರೆ ಎಂದು ತಿಳಿದು ಬಂದಿದೆ.
ಸುಪಾರಿ ಹಂತಕರಿಂದ ತಮ್ಮ ಮೇಲೆ ಕೊಲೆ ಯತ್ನ ನಡೆದಿದೆ ಎಂದು ಆರೋಪಿಸಿ ಡಿಜಿಗೆ ಗುರುವಾರ ದೂರು ನೀಡಿದ್ದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಪುತ್ರ ಹಾಗೂ ಶಾಸಕ ರಾಜೇಂದ್ರ, ಡಿಜಿ ಸೂಚನೆಯಂತೆ ಶುಕ್ರವಾರ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪೆನ್ಡ್ರೈವ್ ಸಮೇತ ದೂರು ನೀಡಿದ್ದಾರೆ.