ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರನ್ಯಾ ರಾವ್ಗೆ ಸಂಬಂಧಿಸಿದ ಸಂಸ್ಥೆಗೆ ಕೆಐಎಡಿಬಿಯಿಂದ ಯಾವುದೇ ಭೂಮಿ ಹಂಚಿಕೆ ಮಾಡಿಲ್ಲ ಎಂದು ಕೆಐಎಡಿಬಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಂ. ಮಹೇಶ್ ಸ್ಪಷ್ಟಪಡಿಸಿದ್ದಾರೆ.
ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ, ಮನೆಗಳಿಗೆ ಭೇಟಿ ನೀಡಿ, ಖುದ್ದಾಗಿ ಪರಿಶೀಲಿಸಲು ಉದ್ದೇಶಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ಶಾಸಕರ ಬಗ್ಗೆ ಸಚಿವರು ತೋರುತ್ತಿರುವ ನಿರ್ಲಕ್ಷ್ಯ ಧೋರಣೆ ಮುಂದುವರಿದಿದೆ. ನಮ್ಮ ಮನವಿ, ಅಹವಾಲುಗಳನ್ನು ಸಚಿವರು ಪರಿಗಣಿಸುತ್ತಿಲ್ಲ ಎಂದು ಸೋಮವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲೂ ವಿವಿಧ ಶಾಸಕರು ಮುಖ್ಯಮಂತ್ರಿಯವರ ಮುಂದೆ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.
ದೇವರ ತಪ್ಪು ಅಧಿವೇಶನದಲ್ಲಿ ಮಂಡನೆ!
-ದೇವಾನುದೇವತೆಗಳ ತಪ್ಪು ಕಂಡುಹಿಡಿದ ಸಾಮ್ರಾಟ್ । ಟ್ರೋಲ್ ಜೋಡಿ ಅಧಿವೇಶನದಲ್ಲಿ ದೂರ ದೂರವಾದ ಕತೆ
ರಾಜ್ಯ ಸರ್ಕಾರ 2025-26ನೇ ಸಾಲಿನಿಂದ 1ನೇ ತರಗತಿಗೆ ದಾಖಲಿಸಲು ಮಕ್ಕಳಿಗೆ ಜೂ.1ಕ್ಕೆ ಕಡ್ಡಾಯವಾಗಿ ಆರು ವರ್ಷ ಪೂರ್ಣಗೊಂಡಿರಬೇಕೆಂದು ಎರಡು ವರ್ಷಗಳ ಹಿಂದೆಯೇ ಜಾರಿಗೊಳಿಸಿದ್ದ ನಿಯಮ ಈಗ ಮತ್ತೆ ಚರ್ಚೆಗೀಡಾಗಿದೆ.
ಹೂಗುಚ್ಛಗಳು ನ್ಯಾಷನಲ್ ವೇಸ್ಟ್ ಎನ್ನುವ ತಮ್ಮ ಹೇಳಿಕೆಯನ್ನು ಸಂಸದ ತೇಜಸ್ವಿ ಸೂರ್ಯ ಅವರು ವಾಪಸ್ ಪಡೆಯಬೇಕು ಎಂದು ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ.ಅರವಿಂದ್ ಮನವಿ ಮಾಡಿದ್ದಾರೆ.
ಬಿಸಿಲನಾಡು ಕಲಬುರಗಿಯಲ್ಲಿ ದಿನೇ ದಿನೆ ಬಿಸಿಲ ತಾಪ ಹೆಚ್ಚಾಗುತ್ತಿದ್ದು, ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ನತ್ತ ತಲುಪಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಗರಿಷ್ಠ ಉಷ್ಣಾಂಶ 2 ರಿಂದ 4 ಡಿ.ಸೆ. ವರೆಗೆ ಹೆಚ್ಚಾಗಿರಲಿದೆ.
ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪೊಲೀಸ್ ಭದ್ರತೆ ಮತ್ತು ಗಸ್ತು ಹೆಚ್ಟಿಸುವ ಜೊತೆ ರಾತ್ರಿ ವೇಳೆ ಶಂಕಾಸ್ಪದ ವ್ಯಕ್ತಿಗಳ ಬೆರಳಚ್ಚು ಪರಿಶೀಲನೆ ವ್ಯವಸ್ಥೆಯನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಹಂಪಿ ಬಳಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಚೆನ್ನೈನಲ್ಲಿ ಭಾನುವಾರ ಬೆಳಗ್ಗೆ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
11.67 ಕೋಟಿ ರು. ಮೌಲ್ಯದ 11 ಕೇಜಿ ಗಾಂಜಾ ಸಾಗಿಸುತ್ತಿದ್ದ ಬೆಂಗಳೂರು ಮೂಲದ ಗೌತಮ್ (23) ಎಂಬಾತನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಗೋವಾದ ಇತಿಹಾಸದಲ್ಲೇ ಒಂದೇ ದಿನದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ಡ್ರಗ್ಸ್ ಜಪ್ತಿ ಮಾಡಿದ್ದು ಇದೇ ಮೊದಲು ಎಂದು ಪೊಲೀಸರು ತಿಳಿಸಿದ್ದಾರೆ.