ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಗುರುವಾರ ಬೆಂಗಳೂರಿನಲ್ಲಿ ಯುವ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಿದರು.
ಬೆಂಗಳೂರು ಅರಮನೆ ಮೈದಾನದ ಭೂಮಿಯಲ್ಲಿ ಯಾವುದೇ ಕಾಮಗಾರಿ ನಡೆಸುವುದು ಅಥವಾ ಕೈ ಬಿಡುವ ಹಕ್ಕನ್ನು ರಾಜ್ಯ ಸರ್ಕಾರದ ವಿವೇಚನೆಗೆ ನೀಡುವಂತಹ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ವಿಧೇಯಕ 2025ಕ್ಕೆ ಬಿಜೆಪಿ ಸಭಾ ತ್ಯಾಗದ ನಡುವೆ ಅನುಮೋದನೆ ಪಡೆಯಲಾಯಿತು.
ಪಶುಸಂಗೋಪನೆ ಇಲಾಖೆಯಲ್ಲಿ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಿದ್ದರೂ ನೇಮಕಾತಿ ಪ್ರಕ್ರಿಯೆ ವಿಳಂಬವಾಗುವ ಹಿನ್ನೆಲೆಯಲ್ಲಿ 360 ಪಶು ವೈದ್ಯಾಧಿಕಾರಿಗಳನ್ನು ಗುತ್ತಿಗೆ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಬುಧವಾರ ನಡೆದಿದ್ದು, ಘಟನೆ ಸಂಬಂಧ ಆರೋಪಿಯನ್ನು ಮುಂಡಗೋಡ ಪೊಲೀಸರು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗಕ್ಕೆ ಮೂಗುದಾರ ಹಾಕಲು ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) ಕಾಯ್ದೆ-1959ಕ್ಕೆ ತಿದ್ದುಪಡಿ ತರಲು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
9ನೇ ಆವೃತ್ತಿಯ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ಗೆ ಅಖಾಡ ಸಿದ್ಧವಾಗಿದೆ. ಮಾ.9ರಂದು ದುಬೈನಲ್ಲಿ ನಡೆಯಲಿರುವ ಈ ಬಾರಿ ಟೂರ್ನಿಯ ಪ್ರಶಸ್ತಿ ಕದನದಲ್ಲಿ ಮಾಜಿ ಚಾಂಪಿಯನ್ಗಳಾದ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಣಸಾಡಲಿವೆ.
ಟೆಕೇಡ್ ಎಂಬುದು ಐಪಿಗಳನ್ನು ಯಾರು ನೋಂದಾಯಿಸುತ್ತಾರೆ ಎಂಬುದರ ಬಗ್ಗೆಯೂ ಅಲ್ಲ ಅಥವಾ ವೈಜ್ಞಾನಿಕ ಮಾನ್ಯತೆಗಾಗಿ ಸ್ಪರ್ಧೆಯೂ ಅಲ್ಲ. ಇದು ಆರ್ಥಿಕ ಬೆಳವಣಿಗೆಯಲ್ಲಿ ವಿಜೇತರು ಮತ್ತು ಪರಾಭವಗೊಂಡವರ ಭವಿಷ್ಯದ ಬಗೆಗಿನ ಮೂಲ ಆಧಾರವಾಗಿದೆ.
- ಇದು ಕೈ ಸರ್ಕಾರ ದಲಿತರಿಗೆ ಮಾಡಿದ ಮೋಸ, ಅನ್ಯಾಯ - ಈ ಬಜೆಟ್ನಲ್ಲೂ ದುರ್ಬಳಕೆಯಾದರೆ ತಡೆ ತರ್ತೇವೆ: ಛಲವಾದಿ
ಸದನದ ನಡಾವಳಿ ಪ್ರಕಾರ ನಡೆದುಕೊಳ್ಳದೆ, ತಮ್ಮ ಆದೇಶಕ್ಕೂ ಮನ್ನಣೆ ಕೊಡದೆ, ಅನುಮತಿ ಇಲ್ಲದೆ ಎದ್ದು ನಿಂತು ಮಾತನಾಡುವ ಸದಸ್ಯರ ನಡವಳಿಕೆಯಿಂದ ತೀವ್ರ ಬೇಸರಗೊಂಡ ಸಭಾಪತಿ ಬಸವರಾಜ ಹೊರಟ್ಟಿ
ಕಲಾಪ ನಡೆಯುವ ಸಂದರ್ಭದಲ್ಲಿ ಶಾಸಕರು ಕಾಫಿ-ಟೀ ಕುಡಿಯುವುದಕ್ಕಾಗಿ ಪದೇಪದೆ ಹೊರ ಹೋಗುವುದನ್ನು ತಪ್ಪಿಸಲು ಸದನದೊಳಗೇ ಕಾಫಿ-ಟೀ ವ್ಯವಸ್ಥೆ ಮಾಡಲು ಸ್ಪೀಕರ್ ಯು.ಟಿ. ಖಾದರ್ ನಿರ್ಧರಿಸಿದ್ದಾರೆ.