ಪಹಲ್ಗಾಂ ಉಗ್ರರ ದಾಳಿ ಘಟನೆ ಬಳಿಕ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರ ವಾಪಸ್ ಕರೆತರಲು ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದ ಸಚಿವರ ತಂಡ ಮಂಗಳವಾರದಿಂದಲೇ ಕನ್ನಡಿಗರನ್ನು ಸಂಪರ್ಕಿಸಿ, ಅವರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯದಲ್ಲಿ ನಿರತವಾಗಿದೆ.
ಜಮ್ಮು-ಕಾಶ್ಮೀರದ ಪಹಲ್ಗಾಂನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಹತರಾದ ಕನ್ನಡಿಗರ ಮನೇಲಿ ಈಗ ನೀರವಮೌನ ಆವರಿಸಿದೆ.
25 ಭಾರತೀಯರು ಹಾಗೂ ಓರ್ವ ನೇಪಾಳಿ ಸೇರಿ 26 ಜನರ ಬಲಿ ಪಡೆದ ಜಮ್ಮು-ಕಾಶ್ಮೀರದ ಪಹಲ್ಗಾಂ ಉಗ್ರ ದಾಳಿಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಭಾರತವು ಪಾಕಿಸ್ತಾನದ ವಿರುದ್ಧ ಮೊದಲ ಪ್ರತೀಕಾರ ಕ್ರಮ ಕೈಗೊಂಡಿದೆ. ಇದರ ಭಾಗವಾಗಿ 6 ‘ರಾಜತಾಂತ್ರಿಕ ನಿರ್ಬಂಧ’ಗಳನ್ನು ಹೇರಿದೆ.
ಪ್ರವಾಸಿಗರನ್ನು ಕೈಬೀಸಿ ತನ್ನತ್ತ ಕರೆಯುತ್ತಿದ್ದ ಜಮ್ಮು- ಕಾಶ್ಮೀರದಲ್ಲಿ ಮತ್ತೆ ಉಗ್ರರ ಬಂದೂಕು ಸದ್ದು ಮಾಡಿದ್ದು, 26 ಪ್ರವಾಸಿಗರನ್ನು ಬಲಿ ಪಡೆದಿದೆ. ಇದರ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿದೆ. ಪಾಕ್ ಬೆಂಬಲಿತ ಉಗ್ರರ ವಿರುದ್ಧ ವಿದೇಶಗಳಲ್ಲೂ ಕೂಗು ಎದ್ದಿದೆ.
ಕಾಶ್ಮೀರದ ಪಹಲ್ಗಾಮ್ ದಾಳಿ ವೇಳೆ ಉಗ್ರರು ನನ್ನ ಅಳಿಯ ಭರತ್ ಭೂಷಣ್ನನ್ನು ’ನೀನು ಹಿಂದುನಾ, ಮುಸ್ಲಿಮಾ’ ಎಂದು ಕೇಳಿದ್ದಾರೆ. ಹಿಂದೂ ಎನ್ನುತ್ತಿದ್ದಂತೆ ಆತನ ತಲೆಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಭರತ್ ಭೂಷಣ್ರ ಅತ್ತೆ ವಿಮಲಾ ಕಣ್ಣೀರಿಡುತ್ತಾ ಮಾಹಿತಿ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿ ಐತಿಹಾಸಿಕ ಸಚಿವ ಸಂಪುಟ ಸಭೆ ಗುರುವಾರ ನಡೆಯಲಿದ್ದು, ಚಾಮರಾಜನಗರ ಸೇರಿ ಸುತ್ತಲಿನ ಜಿಲ್ಲೆಗಳಿಗೆ ಸಂಬಂಧಿಸಿದ 25ಕ್ಕೂ ಹೆಚ್ಚು ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆಗಳಿವೆ.
ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ದಾಳಿಗೆ ಬಲಿಯಾಗಿರುವ ಕನ್ನಡಿಗರ ಪಾರ್ಥಿವ ಶರೀರ ಬುಧವಾರ ತಡರಾತ್ರಿ ರಾಜ್ಯಕ್ಕೆ .
ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಭೀಕರ ಕೊಲೆ ಪ್ರಕರಣ ಸಂಬಂಧ ಇಬ್ಬರ ವಿರುದ್ಧ ಎಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ
ಚಂದನವನದ ನಟ ದರ್ಶನ್ ಜಾಮೀನು ರದ್ದುಕೋರಿರುವ ಅರ್ಜಿ ವಿಚಾರಣೆ ಮಂಗಳವಾರ ಸುಪ್ರೀಂಕೋಟ್೯ನಲ್ಲಿ ಬರಲಿದೆ.
ರಾಜ್ಯ ಹೈಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳನ್ನು ದೇಶದ ಇತರೆ ಹೈಕೋರ್ಟ್ಗಳಿಗೆ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.