ಫೋಟೋ : 19 ಹೆಚ್ಎಸ್ಕೆ 1 ಪ್ರೊಫೆಸರ್ ಭಗವಾನ್ ರವರು ಒಕ್ಕಲಿಗ ಸಮುದಾಯವನ್ನು ಸಂಸ್ಕೃತಿ ಹೀನರು, ಮೂಡರು ಎಂದು ಅÀವಮಾನಿಸಿದ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಗ್ರಾಮದಲ್ಲಿ ಒಕ್ಕಲಿಗ ಸಮುದಾಯದ ಯುವ ಮುಖಂಡ ಕೋಡಿಹಳ್ಳಿ ಜನಾರ್ಧನ್ ರವರು ಸುದ್ದಿಗೋಷ್ಠಿ ನಡೆಸಿ ಹೇಳಿಕೆಯನ್ನು ಖಂಡಿಸಿದರು. | Kannada Prabha
Image Credit: KP
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಆಟೋ ಚಾಲಕನನ್ನು ಸಾರ್ವಜನಿಕರು ಹಿಡಿದು ಧರ್ಮದೇಟು ನೀಡಿ ಬಳಿಕ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.
ಕನ್ನಡಪ್ರಭ ವಾರ್ತೆ, ತುಮಕೂರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಆಟೋ ಚಾಲಕನನ್ನು ಸಾರ್ವಜನಿಕರು ಹಿಡಿದು ಧರ್ಮದೇಟು ನೀಡಿ ಬಳಿಕ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.ನಗರದ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಆರೋಪಿ ಆಟೋ ಚಾಲಕ ಶಾಂತಿನಗರ ಗೂಡ್ಶೆಡ್ ಕಾಲೋನಿ ನಿವಾಸಿ ಶಫಿ ಎಂಬಾತನನ್ನು ಕ್ಯಾತ್ಸಂದ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮನೆಯ ಸಮೀಪ ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ಚಾಕೊಲೇಟ್ ಕೊಡಿಸುವ ನೆಪದಲ್ಲಿ ಆರೋಪಿ ತನ್ನ ಆಟೋಗೆ ಹತ್ತಿಸಿಕೊಂಡಿದ್ದಾನೆ. ಬಳಿಕ ಶಾಂತಿನಗರ ಗೂಡ್ಶೆಡ್ ಕಾಲೋನಿಯಿಂದ ರಿಂಗ್ ರಸ್ತೆ ಕಡೆಗೆ ಕರೆದೊಯ್ದಿದ್ದಾನೆ. ಬಾಲಕಿಯನ್ನು ಆಟೋದಲ್ಲಿ ಕೂರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ಯುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಕೂಡಲೇ ಆತನನ್ನು ಹಿಂಬಾಲಿಸಿದ್ದಾರೆ. ಆಟೋ ನಿರ್ಜನ ಪ್ರದೇಶದಲ್ಲಿ ನಿಲ್ಲುತ್ತಿದ್ದಂತೆ ಸಾರ್ವಜನಿಕರು ಆರೋಪಿಯನ್ನು ಹಿಡಿದು ಧರ್ಮದೇಟು ನೀಡಿದ್ದಾರೆ. ಈ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಬಾಲಕಿಯು ಅಪಾಯದಿಂದ ಪಾರಾಗಿದ್ದು, ಆರೋಪಿಯನ್ನು ಮಹಿಳಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.