ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತುಮಕೂರು ಜೈಲಿನಲ್ಲಿರುವ ನಟ ದರ್ಶನ್ನ ಮೂವರು ಸಹಚರರಿಗೆ ಜಾಮೀನು ಮಂಜೂರಾದರೂ ಬುಧವಾರ ಬಿಡುಗಡೆ ಭಾಗ್ಯ ಸಿಗಲಿಲ್ಲ.
ಬೆಂಗಳೂರಿನಲ್ಲಿ ನೇಪಾಳಿ ಮೂಲದ ಮಹಾಲಕ್ಷ್ಮಿಯನ್ನು ಹತ್ಯೆಗೈದು ನಾಪತ್ತೆಯಾಗಿದ್ದ ಶಂಕಿತ ಕೊಲೆ ಆರೋಪಿ ಮುಕ್ತಿ ರಂಜನ್ ದಾಸ್ ತನ್ನ ಸ್ವಗ್ರಾಮದಲ್ಲಿ ಬದುಕು ಅಂತ್ಯಗೊಳಿಸಿದ್ದಾನೆ. ಸ್ಕೂಟಿಯಲ್ಲಿ ತೆರಳಿದ್ದ ಮುಕ್ತಿ ರಂಜನ್ ಸ್ಮಶಾನದ ಪಕ್ಕದಲ್ಲೇ ಬದುಕು ಅಂತ್ಯಗೊಳಿಸಿದ್ದಾನೆ.
ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪ ಹಿನ್ನೆಲೆಯಲ್ಲಿ ತಮ್ಮ ಬಳಿ ಇದ್ದ ಕೆಲ ಅಶ್ಲೀಲ ವಿಡಿಯೋಗಳನ್ನು ರಾಜರಾಜೇಶ್ವರಿ ನಗರದ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಶಗೊಳಿಸಿರಬಹುದು ಎಂಬ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಸೇರಿದಂತೆ ನೆರೆ ರಾಜ್ಯಗಳಲ್ಲಿ ರಾತ್ರಿ ವೇಳೆ ಅಂಗಡಿಗಳ ಬೀಗ ಮುರಿದು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು ₹3.30 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಗಳು ಹಾಗೂ ಎರಡು ಕಾರುಗಳನ್ನು ಜಪ್ತಿ ಮಾಡಿದ್ದಾರೆ.