ಸಬ್ ಇನ್ಸ್ಪೆಕ್ಟರೊಬ್ಬರು ಮೂವರು ವಿದ್ಯಾರ್ಥಿನಿಯರಿಗೆ ಮಾನಸಿಕ, ಲೈಂಗಿಕ ಕಿರುಕುಳ ನೀಡಿದ್ದು, ಅವರಿಂದ ಹಣ ಪಡೆದು ವಂಚನೆ ಮಾಡಿದ್ದಾರೆಂದು ಆರೋಪಿಸಿ ಮೈಸೂರಿನ ಬುಡಕಟ್ಟು ಅಭಿವೃದ್ಧಿ ಸಂಘದ ವತಿಯಿಂದ ಬೆಂಗಳೂರಿನ ಮಹಿಳಾ ಆಯೋಗ ಹಾಗೂ ಮೈಸೂರು ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ.
ವಿಧವೆ ವಾಸವಾಗಿದ್ದ ಒಂಟಿ ಮನೆಗೆ ನುಗ್ಗಿದ ದುಷ್ಕರ್ಮಿಗಳ ಗುಂಪು ಆಕೆಗೆ ಮಾರಕಾಸ್ತ್ರ ತೋರಿಸಿ ಬೆದರಿಕೆ, ಹಲ್ಲೆನಡೆಸಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ಪದಾರ್ಥಗಳನ್ನು ದರೋಡೆ ಮಾಡಿರುವ ಘಟನೆ ಮದ್ದೂರು ಪಟ್ಟಣದ ವಿನಾಯಕ ಬಡಾವಣೆಯಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ.
ವಿದೇಶಿದಿಂದ ಅಕ್ರಮವಾಗಿ ಚಿನ್ನ ಸಾಗಿಸುವಾಗ ಇಬ್ಬರು ಭಾರತೀಯರು ಸೇರಿದಂತೆ ನಾಲ್ವರನ್ನು ಪ್ರತ್ಯೇಕವಾಗಿ ಬಂಧಿಸಿ ಸುಮಾರು ₹1 ಕೋಟಿ ಮೌಲ್ಯದ ಬಂಗಾರವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ಜಪ್ತಿ ಮಾಡಿದ್ದಾರೆ.
ನಕಲಿ ವಜ್ರದ ಹರಳುಗಳನ್ನು ಅಸಲಿ ಎಂದು ವ್ಯಕ್ತಿಯೊಬ್ಬರನ್ನು ನಂಬಿಸಿ ವಂಚಿಸಲು ಯತ್ನಿಸಿದ ಆರೋಪದಡಿ ನಾಲ್ವರು ಆರೋಪಿಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ.