ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಬಳಿ ಕಳೆದ ಜ7ರಂದು ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿತ್ತು. ತಾಲೂಕಿನ ಎಚ್.ಕೋಡಿಹಳ್ಳಿಯ ನಾಗರಾಜು ಪುತ್ರ ಸ್ಕೂಟರ್ ಚಾಲಕ ಹೇಮಂತ್ (21) ತೀವ್ರವಾಗಿ ಗಾಯಗೊಂಡಿದ್ದರು.
ಜೆಟ್ಲ್ಯಾಗ್ ಪಬ್ನಲ್ಲಿ ‘ಕಾಟೇರ’ ಚಿತ್ರ ತಂಡ ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ ಸಂಬಂಧ ಘಟನೆ ದಿನ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಎರಡು ಬಾರಿ ಪಬ್ಗೆ ತೆರಳಿ ಮುಚ್ಚುವಂತೆ ಸೂಚನೆ ನೀಡಿರುವುದಕ್ಕೆ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳು ಲಭ್ಯವಾಗಿವೆ.
ಹಾನಗಲ್ ಗ್ಯಾಂಗ್ ರೇಪ್ ಸಂತ್ರಸ್ತೆಯನ್ನು ಹಾವೇರಿಯ ಸಾಂತ್ವನ ಕೇಂದ್ರದಿಂದ ಉತ್ತರ ಕನ್ನಡದ ಶಿರಸಿ ಬಳಿ ಇರುವ ಆಕೆಯ ಸ್ವಗ್ರಾಮಕ್ಕೆ ಪೊಲೀಸರು ಭಾನುವಾರ ಬಿಟ್ಟು ಬಂದಿದ್ದಾರೆ.
ಅಲ್ಪಸಂಖ್ಯಾತರ ತುಷ್ಟೀಕರಣದ ಮನಸ್ಥಿತಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾನಗಲ್ ಗ್ಯಾಂಗ್ರೇಪ್ ಪ್ರಕರಣ ಮುಚ್ಚಿಹಾಕಲು ಎಲ್ಲ ರೀತಿಯ ಪ್ರಯತ್ನ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡುವ ವೇಳೆ ಹುತಾತ್ಮರಾದ ಮೇಜರ್ ಅಕ್ಷಯ್ ಗಿರೀಶ್ ಅವರ ಸ್ಮರಣಾರ್ಥ ಸಾದಹಳ್ಳಿ ಗ್ರಾಮದ ರಸ್ತೆಯಲ್ಲಿ ಅಳವಡಿಸಿದ್ದ ಶಿಲಾ ಫಲಕಕ್ಕೆ ಹಾನಿಯಾಗಿದೆ.