ಆನೆ ದಂತ ವಶ:ಮೂವರು ಆರೋಪಿಗಳ ಬಂಧನಕಾರಿನಲ್ಲಿ ಅಕ್ರಮವಾಗಿ ಆನೆ ದಂತಗಳನ್ನು ಸಾಗಾಣಿಕೆ ಮಾಡುತ್ತಿದ್ದ ಮೂವರನ್ನು ಪೊಲೀಸ್ ಅರಣ್ಯ ಸಂಚಾರಿ ದಳದವರು ಬಂಧಿಸಿರುವ ಘಟನೆ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಬಳಿ ಜರುಗಿದೆ. ಚಾಮರಾಜನಗರ ತಾಲೂಕಿನ ಅಂಕನಶೆಟ್ಟಿಪುರ ಗ್ರಾಮದ ಶಿವಮೂರ್ತಿ(57) ಹಾಗೂ ತಮಿಳುನಾಡಿನ ತಿರುಪೂರು ಜಿಲ್ಲೆಯ ರವನಪುರಂ ಗ್ರಾಮದ ಶಿವಕುಮಾರ್(44), ಅಂಡಿಪಾಳ್ಯಂ ಚಿನ್ನಕವುಂಡನ್ ಅಂತೋಣಿ(46) ಬಂಧಿತ ಆರೋಪಿಗಳು. ಆರೋಪಿಗಳಿಂದ ಆನೆಯ ಎರಡು ದಂತಗಳು ಹಾಗೂ ಸಾಗಾಣಿಕೆ ಬಳಸಿದ್ದ ಹುಂಡೈ ಕಂಪನಿಯ ಕ್ರೇಟಾ ಕಾರ್( ಟಿ.ಎನ್.59 ಸಿಆರ್. 1273) ಜಪ್ತಿ ಮಾಡಲಾಗಿದೆ.