ಆನ್ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚುತ್ತಿರುವ ವಂಚನೆ ಪ್ರಕರಣಗಳಲ್ಲಿ ಆರೋಪಿತರಿಗೆ ಕರುಣೆ ತೋರಿದಲ್ಲಿ ಇಡೀ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದಿರುವ ಹೈಕೋರ್ಟ್, ಮಹಿಳೆಯೊಬ್ಬರಿಗೆ ₹4 ಕೋಟಿ ವಂಚಿಸಿದ್ದ ಪ್ರಕರಣದ ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಖಾಸಗಿ ಆಸ್ತಿ ಸೀಜ್ ಮಾಡಿ, ಮಾಲೀಕರಿಗೆ ಆಸ್ತಿ ಹರಾಜು ಹಾಕುವ ಬೆದರಿಕೆ ಹಾಕಿ ಬಾಕಿ ತೆರಿಗೆ ವಸೂಲಿ ಮಾಡುತ್ತಿರುವ ಬಿಬಿಎಂಪಿಯು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸರ್ಕಾರಿ ಇಲಾಖೆಗಳ ಕಟ್ಟಡಗಳಿಂದಲೂ ವಸೂಲಿಗೆ ಸಿದ್ಧತೆ ಆರಂಭಿಸಿದೆ.