ಪ್ರೀತಿಸಿ ಮದುವೆಯಾದ ಮೂರು ತಿಂಗಳಿಗೆ ಪತಿ ಹಾಗೂ ಆತನ ಕುಟುಂಬದ ಸದಸ್ಯರು ವರದಕ್ಷಿಣೆ ಕಿರುಕುಳ ನೀಡಿ ಮನೆಯಿಂದ ಹೊರ ಹಾಕಿದ್ದಾರೆ
ಸಹ ನಟಿ ಮೇಲೆ ಅತ್ಯಾಚಾರ ಆರೋಪದಡಿ ನಟ ಮನು ಮಡೇನೂರು ಬಂಧನ ಪ್ರಕರಣದ ತನಿಖೆ ಮುಂದುವರೆದಿದ್ದು, ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಸಂತ್ರಸ್ತೆ ಹಾಗೂ ಆರೋಪಿಯ ತಲಾ ಎರಡು ಮೊಬೈಲ್ಗಳನ್ನು ಜಪ್ತಿ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ(ಎಫ್ಎಸ್ಎಲ್) ಕಳುಹಿಸಿದ್ದಾರೆ.
ಮಾನಸಿಕ ಅಸ್ವಸ್ಥ ಯುವಕ ಭಾನುವಾರ ಬೆಳಗ್ಗೆ 9.30ರ ಸಮಯದಲ್ಲಿ ತನ್ನ ಹುಚ್ಚಾಟದಿಂದ ಪಿಎಸ್ಎಸ್ಕೆ ಕಾರ್ಖಾನೆ ಬಳಿಯ ರೈಲ್ವೆ ನಿಲ್ದಾಣದ ಮೇಲ್ಸೇತುವೆಯಿಂದ ಜಿಗಿದು ವಿದ್ಯುತ್ ತಂತಿ ನಡುವೆ ಸಿಲುಕಿ ಕೊಂಡಿದ್ದಾನೆ. ಈ ಸಮಯದಲ್ಲಿ ವಿದ್ಯುತ್ ಸರಬರಾಜು ಸ್ಥಗಿತವಾಗಿದ್ದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.
ಕಿರುತೆರೆ ಸಹ ಕಲಾವಿದೆಯ ಮೇಲೆ ನಟ ಮಡೆನೂರು ಮನು ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಕೃತ್ಯ ನಡೆದ ಇಲ್ಲಿನ ಖಾಸಗಿ ಲಾಡ್ಜ್ ಗೆ ಶನಿವಾರ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಸಂತ್ರಸ್ತೆಯ ಜತೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂದಿಸಿದಂತೆ ಮಹಜರು ಪ್ರಕ್ರಿಯೆ ನಡೆಸಿದರು.