ಖಿನ್ನತೆಯಲ್ಲಿದ್ದ ಈಕೆ ಶನಿವಾರ ರಾತ್ರಿ ಮನೆಯಲ್ಲಿ ಮೂರು ವರ್ಷದ ಪುತ್ರ ದೀಕ್ಷಿತ್ಗೆ ನೇಣು ಹಾಕಿದ್ದಾಳೆ. ಪುತ್ರಿ ಧನುಶ್ರೀಗೆ ಕೂಡ ನೇಣು ಹಾಕಲು ಮುಂದಾಗಿದ್ದಾಳೆ. ಧನುಶ್ರೀ ಭಯದಿಂದ ಮನೆಯಿಂದ ಹೊರಗಡೆ ಓಡಿ ಹೋಗಿದೆ. ತದನಂತರ ತಾನೂ ಕೂಡ ನೇಣು ಬಿಗಿದುಕೊಂಡು ಮೃತಳಾಗಿದ್ದಾಳೆ
ಸಂಚಾರಿ ಪೊಲೀಸರ ತಪಾಸಣೆಯನ್ನು ತಪ್ಪಿಸಿಕೊಳ್ಳಲು ಯುವಕರು ಬ್ಯಾರಿಕೇಟ್ ಹಾಗೂ ಮತ್ತೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ನಗರದ ನಂದಾ ಸರ್ಕಲ್ನಲ್ಲಿ ನಡೆದಿದೆ.
ಗೋವುಗಳನ್ನು ಆರಾಧಿಸುಚ ಸಂಕ್ರಾಂತಿಗೂ ಮುನ್ನ ಬೆಂಗಳೂರಿನಲ್ಲಿ ಪೈಚಾಚಿಕ ಘಟನೆಯೊಂದು ನಡೆದಿದ್ದು, ನಗರದ ಮನೆಯೊಂದರ ಶೆಡ್ನಲ್ಲಿ ಕಟ್ಟಿಹಾಕಿದ್ದ 3 ಸೀಮೆ ಹಸುಗಳ ಕೆಚ್ಚಲನ್ನು ದುಷ್ಕರ್ಮಿಗಳು ಕೊಯ್ದು, ಕ್ರೂರತೆ ಮೆರೆದ ಘಟನೆ ನಡೆದಿದೆ.
ಅನಧಿಕೃತ ಮೈಕ್ರೋ ಫೈನಾನ್ಸ್ ಸಾಲ ವಸೂಲಿಗಾರರ ಕಿರುಕುಳ ತಡೆಯಲಾಗದೇ ಚಾಮರಾಜನಗರ ತಾಲೂಕಿನ ಹೆಗ್ಗವಾಡಿಪುರ, ದೇಶವಳ್ಳಿ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ನೂರಾರು ಕುಟುಂಬಗಳ ಜನರು ಗ್ರಾಮ ತೊರೆದ ಆಘಾತಕಾರಿ ಘಟನೆ ನಡೆದಿದೆ
ಸಚಿವ ಪ್ರಿಯಾಂಕ್ ಖರ್ಗೆ ಹೆಸರು ತಳುಕು ಹಾಕಿಕೊಂಡ ಕಾರಣಕ್ಕೆ ತೀವ್ರ ರಾಜಕೀಯ ಮೇಲಾಟಕ್ಕೆ ಕಾರಣವಾಗಿದ್ದ ಯುವ ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮಹತ್ಯೆ ಪ್ರಕರಣ ಕುರಿತು ಶುಕ್ರವಾರ ವಿಚಾರಣೆಗೆ ಹಾಜರಾಗಿದ್ದ ರಾಜು ಕಪನೂರ್, ಇತರ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.