ಪೊಲೀಸರ ಮೇಲೆ ಅತ್ಯಾ*ರ ಹಾಗೂ ಮಾನಸಿಕ ಕಿರುಕುಳ ಆರೋಪ ಹೊರಿಸಿ ಕೈನಲ್ಲಿ ಮರಣಪತ್ರ ಬರೆದುಕೊಂಡು ಆತ್ಮ*ತ್ಯೆ ಮಾಡಿಕೊಂಡ ಮಹಾರಾಷ್ಟ್ರದ ಸತಾರಾ ವೈದ್ಯೆಯ ಮತ್ತೊಂದು 4 ಪುಟಗಳ ಡೆತ್ನೋಟ್ ಆಕೆ ತಂಗಿದ್ದ ಹೋಟೆಲ್ನಲ್ಲಿ ಸಿಕ್ಕಿದೆ. ಅದರಲ್ಲಿ ಸಂಸದನಿಂದಲೂ ತನಗೆ ಬೆದರಿಕೆ ಬಂದಿತ್ತು ಎಂದು ಆಕೆ ಬರೆದಿದ್ದಾರೆ.
ಮದ್ದೂರು ತಾಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಾಚಹಳ್ಳಿ ಬಳಿ ಶುಕ್ರವಾರ ಸಾರಿಗೆ ಸಂಸ್ಥೆ ಬಸ್ ಹಾಗೂ ಕಾರು ನಡುವೆ ಸಂಭವಿಸಿದ್ದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೊರ್ವ ಮಹಿಳೆ ಮೃತಪಟ್ಟಿದ್ದಾರೆ.
ಖಾಸಗಿ ಶಾಲಾ ವಾಹನಗಳ ಪಾನಪತ್ತ ಚಾಲಕರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡು ಸಂಚಾರ ವಿಭಾಗದ ಪೊಲೀಸರು ನಶೆ ಇಳಿಸಿದ್ದಾರೆ. ನಗರ ವ್ಯಾಪ್ತಿ ಬೆಳಗ್ಗೆ 7 ರಿಂದ 9.30 ರವರೆಗೆ ಖಾಸಗಿ ಶಾಲಾ ವಾಹನಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ
ಸಾರಿಗೆ ಸಂಸ್ಥೆ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟು, ಓರ್ವ ವೃದ್ಧೆ, ಬಸ್ ಚಾಲಕ ಮತ್ತು ನಿರ್ವಾಹಕಿ ಸೇರಿದಂತೆ 18 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜರುಗಿದೆ.
ಮನೆಯೊಂದಕ್ಕೆ ನುಗ್ಗಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾ*ರ ಹಾಗೂ ಹಣ ಮತ್ತು ಮೊಬೈಲ್ ಫೋನ್ಗಳ ದೋಚಿದ ಆರು ಮಂದಿ ದರೋಡೆಕೋರರನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಶೋಧ ನಡೆದಿದೆ.
ನಗರದಲ್ಲಿ 100 ಮಿಲಿಯನ್ ಡಾಲರ್ ಮೌಲ್ಯದ ಸ್ಟಾರ್ಟಪ್ಗಳನ್ನು ಸ್ಥಾಪಿಸಿರುವ ಯುನೈಟೆಡ್ ಕಿಂಗ್ಡಮ್ ಮೂಲದ ಉದ್ಯಮಿ, ಗೇಮ್ ಡಿಸೈನರ್ ಒಲಿವರ್ ಜಾನ್ಸ್ ಮೇಲೆ ಇತ್ತೀಚೆಗೆ ಬೀದಿ ನಾಯಿ ಕಚ್ಚಿ ಗಾಯಗೊಳಿಸಿದೆ.