ಮನೆ ಬಾಗಿಲಿನ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ನಗದು, ಚಿನ್ನ ದೋಚಿ ಪರಾರಿಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ಕ್ಯಾತೇಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮತ್ತೊಂದು ಪ್ರಕರಣ ಹೊಸದೊಡ್ಡಿ ಗ್ರಾಮದಲ್ಲಿ ನಡೆದಿದೆ.
ವಿದ್ಯುತ್ ಮಾರ್ಗದ ದುರಸ್ತಿಗಾಗಿ ಕಂಬವೇರಿದ್ದ ಚೆಸ್ಕಾಂನ ಲೈನ್ ಮ್ಯಾನ್ಗೆ ಇದ್ದಕ್ಕಿದ್ದಂತೆ ವಿದ್ಯುತ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಸಮೀಪದ ಮಳವಳ್ಳಿ-ಕೊಳ್ಳೇಗಾಲ ರಸ್ತೆಯ ರೊಟ್ಟಿಕಟ್ಟೆ ಬಳಿ ಶುಕ್ರವಾರ ಜರುಗಿದೆ.
ದೇಶದಲ್ಲೇ ಮೊದಲ ಬಾರಿಗೆ ಅಪರಾಧ ಪ್ರಕರಣಗಳ ತನಿಖೆಯ ಸುಧಾರಣೆ ಸಲುವಾಗಿ ಠಾಣೆಗೊಬ್ಬ ಅಪರಾಧ ಘಟನಾ ಸ್ಥಳಾಧಿಕಾರಿ (ಸೊಕೊ-ಸೀನ್ಸ್ ಆಫ್ ಕ್ರೈಂ ಆಫೀಸರ್) ನೇಮಿಸಲು ರಾಜ್ಯ ಪೊಲೀಸ್ ಇಲಾಖೆ ಮುಂದಾಗಿದೆ.
ಹೈಕೋರ್ಟ್ ನ್ಯಾಯಾಧೀಶರ ಹೆಸರಿನಲ್ಲಿ ನಕಲಿ ಆದೇಶ ಸಿದ್ಧಪಡಿಸಿ ಯುವತಿ ಸೇರಿ ನಾಲ್ವರಿಗೆ ಕಳುಹಿಸಿ ₹1.53 ಕೋಟಿ ಹಣ ಪಡೆದು ವಂಚಿಸಿದ್ದ ಆರೋಪದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಟಿ ರನ್ಯಾ ರಾವ್ ಪ್ರಕರಣ ಇದೀಗ ಮಹತ್ವದ ತಿರುವು ನೀಡಿದೆ. ‘ನಾನು ಟ್ರ್ಯಾಪ್ಗೊಳಗಾಗಿದ್ದೆ’ ಎಂದು ನಟಿ ರನ್ಯಾ ಹೇಳಿಕೆ ನೀಡಿದ್ದು, ಹೀಗಾಗಿ ‘ಟ್ರ್ಯಾಪ್’ನ ಹಿಂದಿರುವ ಹ್ಯಾಂಡ್ಲರ್ಗಳಿಗಾಗಿ ಇದೀಗ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯದ (ಡಿಆರ್ಇ) ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ.
ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಮತ್ತು ಉಪಲೋಕಾಯುಕ್ತರಾದ ನ್ಯಾ.ಕೆ.ಎನ್.ಫಣೀಂದ್ರ, ನ್ಯಾ.ಬಿ.ವೀರಪ್ಪ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು, ನ್ಯಾಯಾಂಗ ಅಧಿಕಾರಿಗಳು ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 25 ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿದರು.