ಅಮೆರಿಕಾ ಪ್ರಜೆಗಳನ್ನು ‘ಡಿಜಿಟಲ್ ಅರೆಸ್ಟ್’ಗೊಳಪಡಿಸಿ ಕೋಟ್ಯಂತರ ರು. ಹಣ ಸುಲಿಗೆ ಮಾಡಿದ್ದ ಅಂತಾರಾಷ್ಟ್ರೀಯ ಮಟ್ಟದ ಸೈಬರ್ ವಂಚಕರ ಜಾಲವೊಂದನ್ನು ಭೇದಿಸಿದ ಎಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು, ಈ ಸಂಬಂಧ ನಕಲಿ ಬಿಪಿಓವೊಂದರ ಕಂಪನಿ ಮೇಲೆ ದಾಳಿ ನಡೆಸಿ 16 ಮಂದಿಯನ್ನು ಸೆರೆ ಹಿಡಿದಿದ್ದಾರೆ.
ದೀಪಾವಳಿ ಹಿನ್ನೆಲೆಯಲ್ಲಿ ಅಕ್ರಮವಾಗಿ ಪಟಾಕಿ ಸಂಗ್ರಹ ಮಾಡಿದ್ದ ವ್ಯಾಪಾರಿಯೊಬ್ಬನನ್ನು ಕುಂಬಳಗೋಡು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉಲ್ಲಾಳದ ಮುನೇಶ್ವರ ನಗರದ ನಿವಾಸಿ ಎಸ್.ಬಿ. ಶ್ರೀನಿವಾಸ್ ಬಂಧಿತನಾಗಿದ್ದು, ಆರೋಪಿಯಿಂದ 10.13 ಲಕ್ಷ ರು. ಮೌಲ್ಯದ ಪಟಾಕಿ ಜಪ್ತಿ ಮಾಡಲಾಗಿದೆ
ವಿಶೇಷ ಪೂಜೆ ಮಾಡಿ ಕಷ್ಟ ಕಾರ್ಪಣ್ಯ ನಿವಾರಿಸುವುದಾಗಿ ಜನರಿಗೆ ಮಂಕುಬೂದಿ ಎರಚಿ ಚಿನ್ನಾಭರಣ ದೋಚುತ್ತಿದ್ದ ನಕಲಿ ಮಂತ್ರವಾದಿಯೊಬ್ಬ ಹುಳಿಮಾವು ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.ಕೋಲಾರದ ದಾದಾಪೀರ್ ಬಂಧಿತನಾಗಿದ್ದು, ಆರೋಪಿಯಿಂದ 53 ಲಕ್ಷ ರು. ಮೌಲ್ಯದ 485 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ
ಆನ್ಲೈನ್ ವಂಚನೆ ಮೂಲಕ ದೇಶಾದ್ಯಂತ ಹಲವರ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕಿ ಸುಮಾರು 150 ಕೋಟಿ ರು.ಎಗರಿಸಿದ್ದ ಅಂತಾರಾಜ್ಯ ಸೈಬರ್ ವಂಚಕನನ್ನು ದಾವಣಗೆರೆಯ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.