ಅನುಮಾನ ಪಟ್ಟು ತುಂಬು ಗರ್ಭಿಣಿ ಹತ್ಯೆ: ಆರೋಪಿ ಪತಿ ಬಂಧನ

| Published : Jun 10 2025, 10:45 AM IST

ಅನುಮಾನ ಪಟ್ಟು ತುಂಬು ಗರ್ಭಿಣಿ ಹತ್ಯೆ: ಆರೋಪಿ ಪತಿ ಬಂಧನ
Share this Article
  • FB
  • TW
  • Linkdin
  • Email

ಸಾರಾಂಶ

ಆರೋಪಿ ಚಂದನ್ ಪತ್ನಿ ಆಶಾ ಬೇರೆ ಪುರುಷರ ಜೊತೆ ಮಾತನಾಡುತ್ತಿದ್ದಳು ಎಂಬ ಕಾರಣಕ್ಕೆ ಕಳೆದ ಶನಿವಾರ ಬೆಳಗ್ಗೆ 6 ಸಮಯದಲ್ಲಿ ಆಕೆ ಕುತ್ತಿಗೆಗೆ ಧರಿಸಿದ್ದ ವೇಲ್ ಜೊತೆಗೆ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ಪರಾರಿಯಾಗಿದ್ದನು.

ಮದ್ದೂರು:

ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕಳೆದ ಶನಿವಾರ ನಡೆದಿದ್ದ ತುಂಬು ಗರ್ಭಿಣಿ ಆಶಾ ಹತ್ಯೆ ಪ್ರಕರಣ ಸಂಬಂಧ ಆಕೆಯ ಪತಿ ಚಂದನ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಚಂದನ್ ಪತ್ನಿ ಆಶಾ ಬೇರೆ ಪುರುಷರ ಜೊತೆ ಮಾತನಾಡುತ್ತಿದ್ದಳು ಎಂಬ ಕಾರಣಕ್ಕೆ ಕಳೆದ ಶನಿವಾರ ಬೆಳಗ್ಗೆ 6 ಸಮಯದಲ್ಲಿ ಆಕೆ ಕುತ್ತಿಗೆಗೆ ಧರಿಸಿದ್ದ ವೇಲ್ ಜೊತೆಗೆ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ಪರಾರಿಯಾಗಿದ್ದನು.

ಈ ಸಂಬಂಧ ಸಂಶಯಾಸ್ಪದ ಸಾವು ಎಂದು ಪ್ರಕರಣ ದಾಖಲು ಮಾಡಿಕೊಂಡಿದ್ದ ಪಿಎಸ್ಐ ಮಂಜುನಾಥ್ ತನಿಖೆ ಕೈಗೊಂಡಿದ್ದರು. ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರು ಗರ್ಭಿಣಿ ಆಶಾಳ ಶವದ ಮರಣೋತ್ತರ ಪರೀಕ್ಷೆ ಸಮಯದಲ್ಲಿ ಕುತ್ತಿಗೆ ಬಿಗಿದು ಕೊಲೆ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಸಿಪಿಐ ಶಿವಕುಮಾರ್ ಹಾಗೂ ಪಿಎಸ್ಐ ಮಂಜುನಾಥ್ ಆಶಾಳ ಪತಿ ಚಂದನ್ ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಇಡೀ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.

ಬಂಧಿತ ಚಂದನ್ ನನ್ನು ಪಟ್ಟಣದ ಜೆಎಂಎಫ್‌ಸಿ ಎರಡನೇ ಅಪರ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಕೆ. ಗೋಪಾಲಕೃಷ್ಣ ಅವರ ಮುಂದೆ ಹಾಜರುಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.