ಸಾರಾಂಶ
ಬೆಂಗಳೂರು : ರಾಜ್ಯ ಕನ್ನಡ ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗೆ ನೀಡುವ ಡಾ.ರಾಜ್ ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿ, ವಾರ್ಷಿಕ ಸಾಹಿತ್ಯ ಮತ್ತು ಕಿರುಚಿತ್ರ ಪ್ರಶಸ್ತಿಗಳಿಗೆ 2019ನೇ ಸಾಲಿನ ಪುರಸ್ಕೃತರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
‘ಡಾ.ರಾಜ್ ಕುಮಾರ್ ಪ್ರಶಸ್ತಿ’ಗೆ ಸಿನಿಮಾ ಮತ್ತು ರಂಗಭೂಮಿಯ ಹಿರಿಯ ಕಲಾವಿದೆ ಉಮಾಶ್ರೀ, ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ಗೆ ಎನ್.ಆರ್.ನಂಜುಂಡೇಗೌಡ ಹಾಗೂ ‘ಡಾ.ವಿಷ್ಣುವರ್ಧನ್ ಪ್ರಶಸ್ತಿ’ಗೆ ರಿಚಾರ್ಡ್ ಕ್ಯಾಸ್ಟಲಿನೋ ಆಯ್ಕೆಯಾಗಿದ್ದಾರೆ.
ತಲಾ ಐದು ಲಕ್ಷ ರು.ನಗದು ಹಾಗೂ 50 ಗ್ರಾಂ. ಚಿನ್ನದ ಪದಕ
ಈ ಮೂರು ಪ್ರಶಸ್ತಿಗಳು ತಲಾ ಐದು ಲಕ್ಷ ರು.ನಗದು ಹಾಗೂ 50 ಗ್ರಾಂ. ಚಿನ್ನದ ಪದಕ ಒಳಗೊಂಡಿದೆ.2019ರ ಅತ್ಯುತ್ತಮ ‘ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿ’ಗೆ ಪತ್ರಕರ್ತ ರಘುನಾಥ ಚ.ಹ.ಅವರು ಬರೆದಿರುವ ‘ಬೆಳ್ಳಿ ತೊರೆ’ ಸಿನಿಮಾ ಪ್ರಬಂಧಗಳು ಕೃತಿ ಆಯ್ಕೆಯಾಗಿದೆ. ಅಂಕಿತ ಪುಸ್ತಕ ಈ ಕೃತಿಯನ್ನು ಪ್ರಕಟಿಸಿದೆ. ಈ ಪ್ರಶಸ್ತಿಯು ಕೃತಿಕಾರರಿಗೆ ಹಾಗೂ ಪ್ರಕಾಶಕರಿಗೆ ತಲಾ 20 ಸಾವಿರ ರು.ನಗದು ಮತ್ತು 50 ಗ್ರಾಂ. ಬೆಳ್ಳಿ ಪದಕ ಒಳಗೊಂಡಿದೆ.
‘ಗುಳೆ’ ಕಿರುಚಿತ್ರ ಆಯ್ಕೆ
2019ರ ‘ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ’ಗೆ ಶ್ರೀನಾಥ್ ಎಸ್.ಹಡಗಲಿ ನಿರ್ದೇಶನದ ‘ಗುಳೆ’ ಕಿರುಚಿತ್ರ ಆಯ್ಕೆಯಾಗಿದೆ. ಮನೋಹರ್ ಎಸ್. ಐಯ್ಯರ್ ನಿರ್ಮಿಸಿರುವ ಈ ಚಿತ್ರದ ನಿರ್ದೇಶಕರು ಮತ್ತು ನಿರ್ಮಾಪಕರಿಗೆ ತಲಾ 25 ಸಾವಿರ ರು. ನಗದು ಹಾಗೂ 50 ಗ್ರಾಂ. ಬೆಳ್ಳಿ ಪದಕ ನೀಡಿ ಗೌರವಿಸಲಾಗುತ್ತಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನ.3 ರಂದು ಮೈಸೂರಿನಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.
;Resize=(690,390))
)
)
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))