ನನ್ನ ಅಮ್ಮನ ಕನಸು ನನಸು ಮಾಡಿದ ಸಹೋದರ ರಿಷಬ್ ಶೆಟ್ಟಿ: ಜೂ.ಎನ್‌ಟಿಆರ್‌

| N/A | Published : Sep 29 2025, 09:48 AM IST

ntr, jr ntr
ನನ್ನ ಅಮ್ಮನ ಕನಸು ನನಸು ಮಾಡಿದ ಸಹೋದರ ರಿಷಬ್ ಶೆಟ್ಟಿ: ಜೂ.ಎನ್‌ಟಿಆರ್‌
Share this Article
  • FB
  • TW
  • Linkdin
  • Email

ಸಾರಾಂಶ

ನನ್ನ ಅಮ್ಮನಿಗೊಂದು ಕನಸಿತ್ತು. ಉಡುಪಿ ಶ್ರೀಕೃಷ್ಣನ ದರ್ಶನ ಮಾಡಬೇಕು ಎಂಬುದು. ನಾನು ಮತ್ತು ಅಮ್ಮ ಉಡುಪಿಗೆ ಹೋದಾಗ ತನ್ನ ಕುಟುಂಬದಂತೆ ನೋಡಿಕೊಂಡು ನನ್ನ ಅಮ್ಮನ ಕನಸು ಮಾಡಿದ್ದಾರೆ ರಿಷಬ್ ಶೆಟ್ಟಿ.’

  ಸಿನಿವಾರ್ತೆ

‘ನನ್ನ ಅಮ್ಮನಿಗೊಂದು ಕನಸಿತ್ತು. ಉಡುಪಿ ಶ್ರೀಕೃಷ್ಣನ ದರ್ಶನ ಮಾಡಬೇಕು ಎಂಬುದು. ನಾನು ಮತ್ತು ಅಮ್ಮ ಉಡುಪಿಗೆ ಹೋದಾಗ ತನ್ನ ಕುಟುಂಬದಂತೆ ನೋಡಿಕೊಂಡು ನನ್ನ ಅಮ್ಮನ ಕನಸು ಮಾಡಿದ್ದಾರೆ ರಿಷಬ್ ಶೆಟ್ಟಿ.’

- ಹೀಗೆ ಹೇಳಿದ್ದು ಜೂ.ಎನ್‌ಟಿಆರ್‌. ಹೈದರಾಬಾದ್‌ನಲ್ಲಿ ನಡೆದ ‘ಕಾಂತಾರ ಚಾಪ್ಟರ್‌ 1’ ಪ್ರೀ ರಿಲೀಸ್‌ ಈವೆಂಟ್‌ನಲ್ಲಿ ಮಾತನಾಡಿದ ಅವರು, ‘ನಾನು ಚಿಕ್ಕಂದಿನಲ್ಲಿ ಕೇಳಿದ ಗುಳಿಗ, ಪಂಜುರ್ಲಿ ಕತೆಯನ್ನು ಸಿನಿಮಾ ಆಗಿ ನೋಡುತ್ತೇನೆ ಎಂದು ಯಾವತ್ತೂ ಅಂದುಕೊಂಡಿರಲಿಲ್ಲ. ಆ ಕತೆಯನ್ನು ಸ್ಕ್ರೀನ್‌ ಮೇಲೆ ನೋಡಿದಾಗ ರೋಮಾಂಚಿತನಾದೆ. ರಿಷಬ್‌ ಒಬ್ಬ ಅಪರೂಪದ ನಟ, ನಿರ್ದೇಶಕ. ಅವರು ಈ ಚಿತ್ರಕ್ಕಾಗಿ ಎಷ್ಟು ಕಷ್ಟಪಟ್ಟಿದ್ದಾರೆ ಅಂತ ನನಗೆ ಗೊತ್ತು. ಸಿನಿಮಾದ ಎಲ್ಲಾ ಡಿಪಾರ್ಟ್‌ಮೆಂಟ್‌ಗಳೂ ಅ‍ವರಿಗೆ ಗೊತ್ತು. ಅವರಿಲ್ಲದಿದ್ದರೆ ಈ ಕಾಂತಾರ 1 ಸಿನಿಮಾ ಆಗುತ್ತಿರಲಿಲ್ಲ’ ಎಂದು ಹೇಳಿದ್ದಾರೆ.

ರಿಷಬ್‌ ಶೆಟ್ಟಿ ಮಾತನಾಡಿ, ‘ಜೂ.ಎನ್‌ಟಿಆರ್‌ ಅವರಿಗೆ ನಾನು ಒಳ್ಳೆಯ ಆತಿಥ್ಯ ನೀಡಬೇಕು ಎಂದು ಆಸೆ ಪಟ್ಟಿದ್ದೆ. ಆದರೆ ಕುಂದಾಪುರಕ್ಕೆ ಬಂದಾಗ ಅವರೇ ನಮಗೆ ನಾಟಿಕೋಳಿ ಸಾರು ಮಾಡಿ ಬಡಿಸಿದರು’ ಎಂದರು. ಪ್ರೀರಿಲೀಸ್‌ಗೆ ಸಾವಿರಾರು ಮಂದಿ ಆಗಮಿಸಿದ್ದರು.

Read more Articles on