ದ್ವೇಷದ ಹಿನ್ನೆಲೆಯಲ್ಲಿ ಪರಿಚಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆಗೈದು ಕೊಲೆ ಮಾಡಿ ಪರಾರಿಯಾಗಿದ್ದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದೇಶದ ಹಲವೆಡೆ ಲೌಡ್ಸ್ಪೀಕರ್ ಗದ್ದಲಗಳಾಗುತ್ತಿರುವ ನಡುವೆ, ಪ್ರತಿದಿನದ ನಮಾಜ್ಗೆ ಮೊಬೈಲ್ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಲಾಗಿದೆ. ತಮಿಳುನಾಡು ಮೂಲದ ಕಂಪನಿ ತಯಾರಿಸಿರುವ ಈ ಆ್ಯಪ್ನಲ್ಲಿ, ಮಸೀದಿಗಳಲ್ಲಿ ಮಾಡಲಾಗುವ ಪ್ರಾರ್ಥನೆ (ನಮಾಜ್), ಬಳಕೆದಾರರಿಗೆ ನೇರವಾಗಿ ಕೇಳಲಿದೆ.
ಇದೇ ಮೊದಲ ಬಾರಿಗೆ ಸಾಕ್ಷ್ಯಚಿತ್ರವೊಂದರ ಮೂಲಕ ಭಾರತದ ಕೇಂದ್ರೀಯ ಬ್ಯಾಂಕ್ ಆರ್ಬಿಐ ಚಿನ್ನ ಸಂಗ್ರಹಗಾರದ ಆಳ-ಅಗಲ ಬಹಿರಂಗವಾಗಿದೆ.
‘ಜನಗಣತಿ 2026ರ ಏ.1ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಜಿಲ್ಲೆ/ತಾಲೂಕು ರಚನೆ ಸೇರಿದಂತೆ ಗಡಿಗಳಿಗೆ ಸಂಬಂಧಿಸಿದ ಯಾವುದೇ ಪ್ರಸ್ತಾವಿತ ಬದಲಾವಣೆಗಳಿದ್ದರೆ ಡಿ.31ರ ಒಳಗೆ ಮುಗಿಸಿಕೊಳ್ಳಿ’ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ನಿರ್ದೇಶಿಸಿದೆ.