ಸಿಸೋಡಿಯಾ ಜಾಮೀನು ಅರ್ಜಿ ಹೈಕೋರ್ಟಲ್ಲಿ ವಜಾ

| Published : May 22 2024, 12:47 AM IST

ಸಾರಾಂಶ

: ದೆಹಲಿ ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ದಿಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್‌ ತಿರಸ್ಕರಿಸಿದೆ.

ನವದೆಹಲಿ: ದೆಹಲಿ ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ದಿಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್‌ ತಿರಸ್ಕರಿಸಿದೆ. ಸಿಸೋಡಿಯಾ ಪ್ರಭಾವಿ ವ್ಯಕ್ತಿ ಆಗಿರುವ ಕಾರಣ ಅವರಿಗೆ ಸಾಕ್ಷ್ಯ ನಾಶ ಮಾಡಬಹುದಾದ ಶಕ್ತಿ ಇರುತ್ತದೆ ಎಂಬ ಕಾರಣ ನೀಡಿ ಅರ್ಜಿ ವಜಾಗೊಳಿಸಿದೆ.

ಏ.30ರಂದು ಕೆಳ ನ್ಯಾಯಾಲಯ ಸಿಸೋಡಿಯಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅವರ ಪರ ವಕೀಲರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇಲ್ಲಿಯೂ ಅವರಿಗೆ ಹಿನ್ನಡೆಯಾಗಿದೆ.

ಆದರೆ ವಾರಕ್ಕೆ ಒಮ್ಮೆ ತಮ್ಮ ಪತ್ನಿಯನ್ನು ಭೇಟಿ ಮಾಡುವುಕ್ಕೆ ಅವಕಾಶವನ್ನು ವಿಸ್ತರಿಸಿದೆ. ಜೊತೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಮಾ.9ರಂದು ಸಿಸೋಡಿಯಾ ಅವರನ್ನು ಇ.ಡಿ. ಬಂಧಿಸಿತ್ತು.