ಕಾಶ್ಮೀರದ ಗಡಿಯಲ್ಲಿ ಒಳನುಸುಳಲು ಯತ್ನ: 5 ಲಷ್ಕರ್ ಉಗ್ರರ ಹತ್ಯೆ
KannadaprabhaNewsNetwork | Published : Oct 27 2023, 12:30 AM IST
ಕಾಶ್ಮೀರದ ಗಡಿಯಲ್ಲಿ ಒಳನುಸುಳಲು ಯತ್ನ: 5 ಲಷ್ಕರ್ ಉಗ್ರರ ಹತ್ಯೆ
ಸಾರಾಂಶ
ಇಲ್ಲಿನ ಗಡಿ ನಿಯಂತ್ರಣಾ ರೇಖೆ ಬಳಿ ಪಾಕ್ ಆಕ್ರಮಿತ ಕಾಶ್ಮೀರದಿಂದ ಕುಪ್ವಾರ ಬಳಿಯ ಮಚ್ಚಿಲ್ ಸಮೀಪ ಭಾರತಕ್ಕೆ ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಐವರು ಲಷ್ಕರ್ ಎ ತಯ್ಬಾ ಉಗ್ರರರನ್ನು ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಹೊಡೆದುರುಳಿಸಿದ್ದಾರೆ.
ಶ್ರೀನಗರ: ಇಲ್ಲಿನ ಗಡಿ ನಿಯಂತ್ರಣಾ ರೇಖೆ ಬಳಿ ಪಾಕ್ ಆಕ್ರಮಿತ ಕಾಶ್ಮೀರದಿಂದ ಕುಪ್ವಾರ ಬಳಿಯ ಮಚ್ಚಿಲ್ ಸಮೀಪ ಭಾರತಕ್ಕೆ ಅಕ್ರಮವಾಗಿ ಒಳನುಸುಳಲು ಯತ್ನಿಸಿದ ಐವರು ಲಷ್ಕರ್ ಎ ತಯ್ಬಾ ಉಗ್ರರರನ್ನು ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಹೊಡೆದುರುಳಿಸಿದ್ದಾರೆ. ಒಳನುಸುಳುವಿಕೆ ಬಗ್ಗೆ ಗುಪ್ತಚರ ಇಲಾಖೆಯ ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ಹಾಗೂ ಸೇನೆಯ ಚಿನಾರ್ ಪಡೆ ಜಂಟಿಯಾಗಿ ಮಚ್ಚಿಲ್ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿತು. ಈ ವೇಳೆ ಇಬ್ಬರು ಉಗ್ರರು ಹತರಾದರು ಮಿಕ್ಕವರಿಗೆ ಹುಡುಕಾಟ ಮುಂದುವರೆದಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.