ಸಾರಾಂಶ
ಸ್ವಾತಿ ಮಲಿವಾಲ್ ಮೇಲೆ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಹಲ್ಲೆ ನಡೆದಿದ್ದು ನಿಜ ಎಂಬುದಾಗಿ ಆಮ್ ಆದ್ಮಿ ಪಕ್ಷ ಒಪ್ಪಿಕೊಂಡಿದ್ದು, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ತನ್ನದೇ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಜೊತೆ ವ್ಯಕ್ತಿಯೊಬ್ಬರು ಅನುಚಿತವಾಗಿ ನಡೆದುಕೊಂಡಿದ್ದು ನಿಜ.
ಈ ಬಗ್ಗೆ ಕೇಜ್ರಿವಾಲ್ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಆಮ್ಆದ್ಮಿ ಪಕ್ಷ ಹೇಳಿದೆ.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಪ್ ನಾಯಕ ಸಂಜಯ್ ಸಿಂಗ್, ‘ಸೋಮವಾರ ಸ್ವಾತಿ ಅವರು ಕೇಜ್ರಿವಾಲ್ರನ್ನು ಭೇಟಿಯಾಗಲು ಅವರ ನಿವಾಸಕ್ಕೆ ಬಂದಿದ್ದಾಗ ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರ ಮೇಲೆ ಅನುಚಿತವಾಗಿ ವರ್ತಿಸಿದ್ದಾರೆ.
ಈ ಕುರಿತು ಅರವಿಂದ್ ಕೇಜ್ರಿವಾಲ್ ಗಮನಕ್ಕೆ ತಂದಿದ್ದು, ಬಿಭವ್ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.ಸ್ವತಃ ಕೇಜ್ರಿವಾಲ್ ಅವರೇ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ವಾತಿ ದೂರಿದ್ದರು.