ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ಜನಸೇನಾ ನಾಯಕ ಪವನ್‌ ಕಲ್ಯಾಣ್‌ ಅವರನ್ನು ಹತ್ಯೆ ಮಾಡುವುದಾಗಿ ಅವರ ಕಚೇರಿಗೆ ಕರೆ ಮಾಡಿ ಬೆದರಿಕೆ ಒಡ್ಡಲಾಗಿದೆ.

ಅಮರಾವತಿ: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ಜನಸೇನಾ ನಾಯಕ ಪವನ್‌ ಕಲ್ಯಾಣ್‌ ಅವರನ್ನು ಹತ್ಯೆ ಮಾಡುವುದಾಗಿ ಅವರ ಕಚೇರಿಗೆ ಕರೆ ಮಾಡಿ ಬೆದರಿಕೆ ಒಡ್ಡಲಾಗಿದೆ.

ಈ ಬಗ್ಗೆ ಅವರ ಕಚೇರಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ‘ಕಲ್ಯಾಣ್‌ ಅವರನ್ನು ಗುರಿಯಾಗಿಸಿ ಅವಹೇಳನಕಾರಿ ಸಂದೇಶಗಳನ್ನು ಕಳಿಸಲಾಗಿದೆ. ಡಿಸಿಎಂ ಕಚೇರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ಅವರನ್ನು ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾನೆ’ ಎಂದು ತಿಳಿಸಲಾಗಿದೆ. ಈ ಕುರಿತು ಕಲ್ಯಾಣ್‌ ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.