ಪಹಲ್ಗಾಂ ದುರಂತದ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಯೋಧ ಬಲಿ

| N/A | Published : Apr 25 2025, 12:34 AM IST / Updated: Apr 25 2025, 06:08 AM IST

ಸಾರಾಂಶ

ಪಹಲ್ಗಾಂ ದುರಂತದ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದ್ದು, ಉಗ್ರರ ಗುಂಡಿಗೆ ಯೋಧರೊಬ್ಬರು ಬಲಿಯಾಗಿದ್ದಾರೆ. ಇಲ್ಲಿನ ಉಧಂಪುರದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ವೇಳೆ ಯೋಧ ಹುತಾತ್ಮರಾಗಿದ್ದಾರೆ.

ಜಮ್ಮು : ಪಹಲ್ಗಾಂ ದುರಂತದ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದ್ದು, ಉಗ್ರರ ಗುಂಡಿಗೆ ಯೋಧರೊಬ್ಬರು ಬಲಿಯಾಗಿದ್ದಾರೆ. ಇಲ್ಲಿನ ಉಧಂಪುರದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ವೇಳೆ ಯೋಧ ಹುತಾತ್ಮರಾಗಿದ್ದಾರೆ.

ಭಯೋತ್ಪಾದಕರು ಇರುವ ಖಚಿತ ಮಾಹಿತಿಯ ಮೇರೆಗೆ ದುಡು- ಬಸಂತ್‌ಗಢ ಪ್ರದೇಶದಲ್ಲಿ ಭದ್ರತಾ ಪಡೆ ಸಿಬ್ಬಂದಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಸೇನೆಯ ವಿಶೇಷ ಪಡೆಯ 6ನೇ ಪ್ಯಾರಾ ಸೇನೆಗೆ ಸೇರಿದ ಹವಾಲ್ದಾರ್‌ ಝುಂಟು ಅಲಿ ಶೇಖ್‌ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನೆ ಮಾಹಿತಿ ನೀಡಿದೆ.

ಇದು ಪಹಲ್ಗಾಂ ಘಟನೆ ಬಳಿಕ ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಭದ್ರತಾ ಪಡೆಗಳು ಕೈಗೊಂಡ ಮೂರನೆಯ ಕಾರ್ಯಾಚರಣೆ ಆಗಿದೆ. ಬುಧವಾರ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಮತ್ತು ಬಾರಾಮುಲ್ಲಾದ ಉರಿ ನಾಲಾ ಪ್ರದೇಶದಲ್ಲಿ ಬುಧವಾರ ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆದಿತ್ತು.