ಸಾರಾಂಶ
ಅಶೋಕ್ ಗೆಹ್ಲೋಟ್ಗೆ ಆಮ್ಲಜನಕ ಯಂತ್ರ ಅಳವಡಿಕೆ ಮಾಡಲಾಗಿದ್ದು ಆರೋಗ್ಯ ಸ್ಥಿರವಾಗಿದೆ
ಜೈಪುರ: ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ಗೆ ಕೊರೊನಾ ಸೋಂಕು ಹಾಗೂ ಹಂದಿಜ್ವರ ದೃಢಪಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಗೆಹ್ಲೋಟ್, ‘ಜ್ವರದ ಹಿನ್ನೆಲೆಯಲ್ಲಿ ನಾನು ಜೈಪುರದ ಸವಾಯ್ ಮಾನ್ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ಇಂದು ಕೊರೊನಾ ಪರೀಕ್ಷೆ ನಡೆಸಿದಾಗ ಸೋಂಕು ಇರುವುದು ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಮುಂದಿನ ಏಳು ದಿನಗಳ ಕಾಲ ಯಾರನ್ನೂ ಭೇಟಿ ಮಾಡುವುದಿಲ್ಲ’ ಎಂದು ತಿಳಿಸಿದ್ದಾರೆ. ಈ ನಡುವೆ ಗೆಹ್ಲೋಟ್ ಅವರಿಗೆ ಆಮ್ಲಜನಕ ಸಿಲಿಂಡರ್ ಅಳವಡಿಕೆ ಮಾಡಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಅಚಲ್ ಶರ್ಮಾ ತಿಳಿಸಿದ್ದಾರೆ.