ವೈಜಾಗ್ ಉಕ್ಕು ಕಾರ್ಖಾನೆಗೆ 11 ಸಾವಿರ ಕೋಟಿ ರು. ಪ್ಯಾಕೇಜ್: ಎಚ್.ಡಿ. ಕುಮಾರಸ್ವಾಮಿ
Author : KannadaprabhaNewsNetwork
| Updated : Jan 18 2025, 04:28 AM IST
ಕುಮಾರಸ್ವಾಮಿ | Kannada Prabha
Image Credit: KP
ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆಗೆ ಕೇಂದ್ರ ಸರ್ಕಾರ 11,440 ಕೋಟಿ ರು. ಪುನಶ್ಚೇತನ ಪ್ಯಾಕೇಜ್ ನೀಡಲು ನಿರ್ಧರಿಸಿದೆ.
ನವದೆಹಲಿ: ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆಗೆ ಕೇಂದ್ರ ಸರ್ಕಾರ 11,440 ಕೋಟಿ ರು. ಪುನಶ್ಚೇತನ ಪ್ಯಾಕೇಜ್ ನೀಡಲು ನಿರ್ಧರಿಸಿದೆ.
ಕೇಂದ್ರದ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ಈ ವಿಷಯ ಪ್ರಕಟಿಸಿ, ‘ಇದು ಐತಿಹಾಸಿಕ ನಿರ್ಧಾರ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಇದು ಸಾಧ್ಯವಾಗಿದೆ. ದೇಶೀಯ ಉಕ್ಕು ಕ್ಷೇತ್ರಕ್ಕೆ ಶಕ್ತಿ ತುಂಬುವ ದಿಟ್ಟ ಹೆಜ್ಜೆ ಇದಾಗಿದೆ’ ಎಂದರು.
ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವೀಟ್ ಮಾಡಿ, ‘ಆತ್ಮನಿರ್ಭರ ಭಾರತಕ್ಕೆ ಇದು ನೆರವಾಗಲಿದೆ’ ಎಂದು ಹರ್ಷಿಸಿದ್ದಾರೆ.
7.5 ದಶಲಕ್ಷ ಟನ್ ಸಾಮರ್ಥ್ಯದ ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಹಲವು ವರ್ಷಗಳಿಂದ ಆರ್ಥಿಕ ಸಮಸ್ಯೆ ಎದುರಿಸುತ್ತಿದೆ ಸುಮಾರು 36 ಸಾವಿರ ಕೋಟಿ ರು. ಬಾಕಿಯನ್ನು ಕಾರ್ಖಾನೆ ಉಳಿಸಿಕೊಂಡಿದೆ.
Latest Videos
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.