ಬಜೆಟ್‌ನಲ್ಲಿ 50 ಸಾವಿರ ಕೋಟಿ ರು.ಗೆ ನಿತೀಶ್, ನಾಯ್ಡು ಪಟ್ಟು

| Published : Jul 10 2024, 12:35 AM IST

ಬಜೆಟ್‌ನಲ್ಲಿ 50 ಸಾವಿರ ಕೋಟಿ ರು.ಗೆ ನಿತೀಶ್, ನಾಯ್ಡು ಪಟ್ಟು
Share this Article
  • FB
  • TW
  • Linkdin
  • Email

ಸಾರಾಂಶ

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜು.23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್‌ನಿಂದ ತಮ್ಮ ರಾಜ್ಯಗಳಿಗೆ ಸುಮಾರು 50 ಸಾವಿರ ಕೋಟಿ ರು.ಗೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜು.23 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್‌ನಿಂದ ತಮ್ಮ ರಾಜ್ಯಗಳಿಗೆ ಸುಮಾರು 50 ಸಾವಿರ ಕೋಟಿ ರು.ಗೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಮೋದಿ ಸರ್ಕಾರ ಈ ಇಬ್ಬರ ಪಕ್ಷಗಳಾದ ಟಿಡಿಪಿ ಹಾಗೂ ಜೆಡಿಯು ಬೆಂಬಲ ಆಧರಿಸಿಯೇ ಜೀವಿತವಾಗಿದೆ. ಹೀಗಾಗಿ ಇವರ ಬೇಡಿಕೆಯು ಮೋದಿಗೆ ತಲೆನೋವಾಗಿ ಪರಿಣಮಿಸುವ ಸಾಧ್ಯತೆ ಇದೆ.

ಎರಡು ರಾಜ್ಯಗಳು 2025ನೇ ಸಾಲಿಗೆ ಹೆಚ್ಚುವರಿ ನಿಧಿಯಾಗಿ ಸುಮಾರು 48,000 ಕೋಟಿ ರು.ಗೆ ಬೇಡಿಕೆ ಇಟ್ಟಿವೆ. ಇದರ ಜತೆಗೆ ಕೇಂದ್ರವು ಬಂಡವಾಳ ವೆಚ್ಚಕ್ಕಾಗಿ ನೀಡುವ 1 ಲಕ್ಷ ಕೋಟಿ ರು. ಬಡ್ಡಿ ರಹಿತ ದೀರ್ಘಾವಧಿಯ ಸಾಲವನ್ನು ದ್ವಿಗುಣಗೊಳಿಸಲು ರಾಜ್ಯಗಳು ಕೇಳಿಕೊಂಡಿವೆ ಎಂದು ವರದಿ ಹೇಳಿದೆ.

ಈ ಹಿಂದಿನ ಸಾಲಿನಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ವಿಶೇಷ ಸಹಾಯಕ್ಕಾಗಿ 1.3 ಲಕ್ಷ ಕೋಟಿ ರು. ಮೀಸಲಿಟ್ಟಿತ್ತು.

ಇದೇ ವೇಳೆ, ಈ ರಾಜ್ಯಗಳು ಮಾರುಕಟ್ಟೆಯಿಂದ ಸಾಲ ಪಡೆಯಲು ಇರುವ ನಿಯಮಗಳ ಸಡಿಲಿಕೆಗೆ ಬೇಡಿಕೆ ಇರಿಸಿವೆ. ಈಗ ಕೇಂದ್ರ ಸರ್ಕಾರವು ಸಾಲದ ಮಿತಿಯನ್ನು ರಾಜ್ಯದ ಆದಾಯ ಅಥವಾ ಒಟ್ಟು ರಾಜ್ಯ ದೇಶೀಯ ಉತ್ಪನ್ನದ (ಜಿಎಸ್‌ಡಿಪಿ) ಶೇ.3ಕ್ಕೆಸೀಮಿತಗೊಳಿಸಿದೆ.

ಬಿಹಾರ ನಿರ್ದಿಷ್ಟವಾಗಿ 9 ಹೊಸ ವಿಮಾನ ನಿಲ್ದಾಣಗಳು, 2 ವಿದ್ಯುತ್ ಯೋಜನೆಗಳು, 2 ನದಿ ನೀರಿನ ಯೋಜನೆ ಮತ್ತು ಯಾವುದೇ ನಿರ್ದಿಷ್ಟ ಕಾಲಮಿತಿಯಿಲ್ಲದೆ 7 ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಹಣ ನೀಡುವಂತೆ ಕೋರಿದೆ.

ಇನ್ನು ಆಂಧ್ರಪ್ರದೇಶವು ರಾಜ್ಯದ ರಾಜಧಾನಿ ಅಮರಾವತಿಯನ್ನು ಅಭಿವೃದ್ಧಿಪಡಿಸಲು ಮತ್ತು ನೀರಾವರಿ ಯೋಜನೆಗೆ ಹಣವನ್ನು ಕೋರಿದೆ.