ಇ.ಡಿ. ದೂರು ಹಿನ್ನೆಲೆ: ಮಾ.16ಕ್ಕೆ ಕೇಜ್ರಿವಾಲ್‌ಗೆ ಕೋರ್ಟ್‌ ಸಮನ್ಸ್‌

| Published : Mar 08 2024, 01:47 AM IST

ಇ.ಡಿ. ದೂರು ಹಿನ್ನೆಲೆ: ಮಾ.16ಕ್ಕೆ ಕೇಜ್ರಿವಾಲ್‌ಗೆ ಕೋರ್ಟ್‌ ಸಮನ್ಸ್‌
Share this Article
  • FB
  • TW
  • Linkdin
  • Email

ಸಾರಾಂಶ

ಅಬಕಾರಿ ಹಗರಣ ವಿಚಾರಣೆಗೆ ಸತತ ಗೈರು ಹಾಜರಾಗಿರುವ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಇ.ಡಿ. ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು.

ನವದೆಹಲಿ: ದಿಲ್ಲಿ ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಮಾ. 16ಕ್ಕೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸ್ಥಳೀಯ ಕೋರ್ಟ್‌ ಸೂಚಿಸಿದೆ,

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ ಪದೇ ಪದೇ ತನ್ನ ಸಮನ್ಸ್‌ ಉಲ್ಲಂಘಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ ಹೊಸ ದೂರು ನೀಡಿತ್ತು. ಇದನ್ನು ಆಧರಿಸಿ ಕೋರ್ಟು ಕೇಜ್ರಿವಾಲ್‌ಗೆ ಸಮನ್ಸ್ ಜಾರಿ ಮಾಡಿದೆ.

ಈ ಪ್ರಕರಣದಲ್ಲಿ ಕೇಜ್ರಿವಾಲ್ ಹಲವು ಸಮನ್ಸ್‌ಗೆ ಗೈರಾಗಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಬುಧವಾರ ನ್ಯಾಯಾಲಯಕ್ಕೆ ದೂರು ಸಲ್ಲಿಸಿತ್ತು.