ರಾಷ್ಟ್ರೀಯ ಭದ್ರತಾ ಸಲಹೆಗಾರ ದೋವಲ್‌ ಚೀನಾ ಭೇಟಿ ಯಶಸ್ವಿ : ಶಾಂತಿ ಸ್ಥಾಪನೆಗೆ ಸಮ್ಮತಿ

| Published : Dec 19 2024, 12:30 AM IST / Updated: Dec 19 2024, 04:27 AM IST

ರಾಷ್ಟ್ರೀಯ ಭದ್ರತಾ ಸಲಹೆಗಾರ ದೋವಲ್‌ ಚೀನಾ ಭೇಟಿ ಯಶಸ್ವಿ : ಶಾಂತಿ ಸ್ಥಾಪನೆಗೆ ಸಮ್ಮತಿ
Share this Article
  • FB
  • TW
  • Linkdin
  • Email

ಸಾರಾಂಶ

ಭಾರತ-ಚೀನಾ ನಿಯೋಗ ಮಟ್ಟದ ಮಾತುಕತೆಗಾಗಿ 5 ವರ್ಷ ಬಳಿಕ ಚೀನಾ ಪ್ರವಾಸ ಕೈಗೊಂಡಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಸಭೆಗಳು ಯಶಸ್ವಿಯಾಗಿವೆ. ಈ ವೇಳೆ ಶಾಂತಿ ಸ್ಥಾಪನೆಗೆ ಹಾಗೂ 5 ವರ್ಷದಿಂದ ನಡೆಯದ ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಉಭಯ ದೇಶಗಳು ಸಮ್ಮತಿಸಿವೆ.

ಬೀಜಿಂಗ್: ಭಾರತ-ಚೀನಾ ನಿಯೋಗ ಮಟ್ಟದ ಮಾತುಕತೆಗಾಗಿ 5 ವರ್ಷ ಬಳಿಕ ಚೀನಾ ಪ್ರವಾಸ ಕೈಗೊಂಡಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಸಭೆಗಳು ಯಶಸ್ವಿಯಾಗಿವೆ. ಈ ವೇಳೆ ಶಾಂತಿ ಸ್ಥಾಪನೆಗೆ ಹಾಗೂ 5 ವರ್ಷದಿಂದ ನಡೆಯದ ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಉಭಯ ದೇಶಗಳು ಸಮ್ಮತಿಸಿವೆ.

ಬುಧವಾರ ಚೀನಾ ಉಪಾಧ್ಯಕ್ಷ ಹ್ಯಾನ್‌ ಝೆಂಗ್‌ ಹಾಗೂ ವಿದೇಶಾಂಗ ಸಚಿವ ಯಿ ವಾಂಗ್ ಅವರನ್ನು ದೋವಲ್‌ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಉಭಯ ದೇಶಗಳು ಶಾಂತಿ ಸ್ಥಾಪನೆಗೆ ಸಹಮತ ವ್ಯಕ್ತಪಡಿಸಿದವು.

ರಡೂ ಕಡೆಯವರು ಗಡಿಯಾಚೆಗಿನ ವಿನಿಮಯ ಮತ್ತು ಸಹಕಾರವನ್ನು ಬಲಪಡಿಸಲು ಮತ್ತು ಮಾನಸ ಸರೋವರ ಯಾತ್ರೆ ಪುನರಾರಂಭಿಸಲು ಮತ್ತು ನಾಥುಲಾ ಗಡಿ ವ್ಯಾಪಾರವನ್ನು ಉತ್ತೇಜಿಸಲು ಒಪ್ಪಿಕೊಂಡರು ಎಂದು ಚೀನಾ ವಿದೇಶಾಂಗ ಸಚಿವಾಲಯ ಹೇಳಿದೆ. ಕೋವಿಡ್‌ ನಂತರ (2020ರ ನಂತರ) ಮಾನಸ ಸರೋವರ ಯಾತ್ರೆ ಸ್ಥಗಿತಗೊಂಡಿದೆ.

ಇದು ಶಾಂತಿ ಸ್ಥಾಪನೆಯತ್ತ ಮಹತ್ವದ ಹೆಜ್ಜೆ ಎಂದು ದೋವಲ್‌ ಹೇಳಿದ್ದಾರೆ.

ಪೂರ್ವ ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ)ಯಲ್ಲಿ ಶಾಂತಿ ಸ್ಥಾಪನೆ ಮತ್ತು ಲಡಾಖ್‌ನಲ್ಲಿನ ಬಿಕ್ಕಟ್ಟಿನಿಂದಾಗಿ ಕಳೆದ 5 ವರ್ಷಗಳಿಂದ (2019ರಿಂದ) ನಿಯೋಗ ಮಟ್ಟದ ಮಾತುಕತೆ ನಡೆದಿರಲಿಲ್ಲ. ಆದರೆ ಈಗ ಸ್ಥಿತಿ ಸುಧಾರಿಸಿದ ಕಾರಣ ಚೀನಾಗೆ ದೋವಲ್‌ ಭೇಟಿ ನೀಡಿದ್ದಾರೆ. 5 ವರ್ಷಗಳ ಹಿಂದೆ ಕೊನೆಯ ಸಭೆ ದೆಹಲಿಯಲ್ಲಿ ನಡೆದಿತ್ತು.