ಹಿಂದಿ ಹೇರಿಕೆ ವಿರುದ್ಧ ಡಿಎಂಕೆ ಕಾರ್ಯಕರ್ತರು ಪ್ರತಿಜ್ಞೆ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಪಕ್ಷದ ಕಾರ್ಪೊರೇಟರ್ ಒಬ್ಬರು ಕಾರ್ಯಕರ್ತೆಯ ಬಳೆ ಎಗರಿಸಲು ಯತ್ನಿಸಿದ ಘಟನೆ ನಡೆದಿದೆ.
ಚೆನ್ನೈ: ಹಿಂದಿ ಹೇರಿಕೆ ವಿರುದ್ಧ ಡಿಎಂಕೆ ಕಾರ್ಯಕರ್ತರು ಪ್ರತಿಜ್ಞೆ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಪಕ್ಷದ ಕಾರ್ಪೊರೇಟರ್ ಒಬ್ಬರು ಕಾರ್ಯಕರ್ತೆಯ ಬಳೆ ಎಗರಿಸಲು ಯತ್ನಿಸಿದ ಘಟನೆ ನಡೆದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಘಟನೆ 30 ಸೆಕೆಂಡ್ಗಳ ವಿಡಿಯೋ ಎಕ್ಸ್ನಲ್ಲಿ ಹಂಚಿಕೊಂಡಿದ್ದು ‘ಕಳ್ಳರು ಮತ್ತು ಡಿಎಂಕೆಯನ್ನು ಎಂದಿಗೂ ಪ್ರತ್ಯೇಕಿಸಲು ಸಾಧ್ಯವಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.
ಕಳ್ಳತನಕ್ಕೆ ಯತ್ನಿಸಿದ ಕಾರ್ಪೊರೇಟರ್ನ್ನು ಡಿಎಂಕೆಯ ಕುನೂರು ಪುರಸಭೆಯ ಕೌನ್ಸಿಲರ್ ಜಾಕಿರ್ ಹುಸೇನ್ ಎಂದು ಗುರುತಿಸಲಾಗಿದೆ. ಹುಸೇನ್ ಮಹಿಳೆಯೊಬ್ಬರ ಕೈಯಿಂದ ಚಿನ್ನದ ಬಳೆ ತೆಗೆಯಲು ಯತ್ನಿಸಿದ್ದರು. ಈ ವೇಳೆ ಮತ್ತೊಬ್ಬ ಕಾರ್ಯಕರ್ತೆ ಅದನ್ನು ತಡೆಯಲು ಮುಂದಾಗಿದ್ದಾರೆ. ಆದರೆ ಹುಸೇನ್ ಮತ್ತೆ ಪ್ರಯತ್ನಿಸಿದ್ದಾರೆ. ಈ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.