ಸಾರಾಂಶ
ದೇಶದ ಶಾಂತಿಯನ್ನು ಹಾಳುಗೆಡವಲು ಯತ್ನಿಸುವ ಉಗ್ರರಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿರುವ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್, ಒಂದು ವೇಳೆ ಉಗ್ರರು ಅವರು ಪಾಕಿಸ್ತಾನದೊಳಗೆ ನುಗ್ಗಿದರೆ, ಅವರನ್ನು ಆ ದೇಶದೊಳಗೆ ನುಗ್ಗಿ ಅಲ್ಲಿಯೇ ಮುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನವದೆಹಲಿ: ದೇಶದ ಶಾಂತಿಯನ್ನು ಹಾಳುಗೆಡವಲು ಯತ್ನಿಸುವ ಉಗ್ರರಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿರುವ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್, ಒಂದು ವೇಳೆ ಉಗ್ರರು ಅವರು ಪಾಕಿಸ್ತಾನದೊಳಗೆ ನುಗ್ಗಿದರೆ, ಅವರನ್ನು ಆ ದೇಶದೊಳಗೆ ನುಗ್ಗಿ ಅಲ್ಲಿಯೇ ಮುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪಾಕ್ನಲ್ಲಿ ಕಳೆದ 2 ವರ್ಷದಲ್ಲಿ ನಡೆದ 20 ಉಗ್ರರ ನಿಗೂಢ ಹತ್ಯೆಯಲ್ಲಿ ಭಾರತದ ಕೈವಾಡದ ಕುರಿತು ಬ್ರಿಟನ್ ಪತ್ರಿಕೆ ವರದಿ ಬೆನ್ನಲ್ಲೇ, ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಸಚಿವ ಸಿಂಗ್ ಈ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.
ಪ್ರಧಾನಿ ಮೋದಿ ಈಗಾಗಲೇ ಸತ್ಯವನ್ನು ಸ್ಪಷ್ಟಪಡಿಸಿದ್ದಾರೆ. ಭಾರತಕ್ಕೆ ಈ ಸಾಮರ್ಥ್ಯ ಇದೆ ಮತ್ತು ಇದೀಗ ಪಾಕಿಸ್ತಾನ ಕೂಡಾ ಅದನ್ನು ಅರ್ಥಮಾಡಿಕೊಳ್ಳುತ್ತಿದೆ ಎಂದು ಸಿಂಗ್ ಹೇಳಿದರು.