ಸಾರಾಂಶ
ಸ್ಪೀಕರ್ ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್ ಶಾಸಕರು ಸುಪ್ರೀಂ ಕೋರ್ಟ್ನಲ್ಲಿ ದಾವೆ ಹೂಡಿದ್ದಾರೆ.
ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಬಿಜೆಪಿಗೆ ಮತ ಹಾಕಿದ ಕಾರಣಕ್ಕಾಗಿ ವಿಧಾನಸಭೆಯಿಂದ ಉಚ್ಛಾಟನೆಗೊಂಡ 6 ಕಾಂಗ್ರೆಸ್ ಶಾಸಕರು, ಸ್ಪೀಕರ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ತಮ್ಮನ್ನು ಹಿಮಾಚಲಪ್ರದೇಶದ ಸ್ಪೀಕರ್ ಆಗಿರುವ ಕುಲ್ದೀಪ್ ಸಿಂಗ್ ಪಥಾನಿಯಾ ಅವರು ಫೆ.29ರಂದು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಬಜೆಟ್ ಅಧಿವೇಶನದಲ್ಲಿ ತಾವು ಮತ ಹಾಕಲು ಸಾಧ್ಯವಾಗಲಿಲ್ಲ ಎಂಬುದಾಗಿ ದಾವೆಯಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯಸಭೆಯಲ್ಲಿ ಆರು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಮತ ಹಾಕಿದ್ದರಿಂದ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿಗಳಿಬ್ಬರೂ ತಲಾ 34 ಮತಗಳನ್ನು ಪಡೆದು ಬಳಿಕ ಲಾಟರಿ ಡ್ರಾನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲಾಗಿತ್ತು.