ಫೋಟುಃ-29ಜಿಎನ್ ಜಿ6—ಗಂಗಾವತಿ ನಗರದ ವಾಲ್ಮೀಕಿ ವೃತ್ತದಲ್ಲಿ ತಾಲೂಕ ಆಡಳಿತ ಮತ್ತುಪರಿಶಿಷ್ಟ ವರ್ಗಗಳ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜರುಗಿದ ಶ್ರೀ ವಾಲ್ಮೀಕಿ ಮಹರ್ಷಿಜಯಂತ್ಯೋತ್ಸವ ಕಾರ್ಯಕ್ರಮವನ್ನು ಶಾಸಕ ಗಾಲಿಜನಾರ್ಧನ ರೆಡ್ಡಿ ಉದ್ಘಾಟಿಸಿದರು | Kannada Prabha
Image Credit: KP
ಕಾಶಿ ವಿಶ್ವನಾಥ ದೇಗುಲದಲ್ಲಿ ವಸ್ತ್ರ ಸಂಹಿತೆ ಅಳವಡಿಸುವ ಕುರಿತು ಮುಂದಿನ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅಧ್ಯಕ್ಷ ನಾಗೇಶ್ ಪಾಂಡೆ ತಿಳಿಸಿದ್ದಾರೆ
ವಾರಾಣಸಿ: ಕಾಶಿ ವಿಶ್ವನಾಥ ದೇಗುಲದಲ್ಲಿ ವಸ್ತ್ರ ಸಂಹಿತೆ ಅಳವಡಿಸುವ ಕುರಿತು ಮುಂದಿನ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅಧ್ಯಕ್ಷ ನಾಗೇಶ್ ಪಾಂಡೆ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು ‘ವಾರಾಣಸಿ ದೇಗುಲದಲ್ಲಿ ವಸ್ತ್ರಸಮಹಿತೆ ಅಳವಡಿಸಬೆಕೆಂದು ವಿವಿಧ ವರ್ಗದ ಜನರಿಂದ ಅಭಿಪ್ರಾಯ ವ್ಯಕ್ತವಾಗಿದೆ. ವಾಸ್ತವತೆಯನ್ನು ಗಮನದಲ್ಲಿಟ್ಟುಕೊಂಡು ದೇಶದ ವಿವಿಧ ದೇಗುಲಗಳಲ್ಲಿ ವಿಧಿಸಲಾಗಿರುವ ವಸ್ತ್ರಸಂಹಿತೆಯ ಕಟ್ಟುಪಾಡುಗಳನ್ನು ಪರಿಶೀಲಿಸಿದ ನಂತರ ಮುಂದಿನ ನವೆಂಬರ್ನಲ್ಲಿ ನಡೆಯುವ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಒಮ್ಮತ ನಿರ್ಧಾರಕ್ಕೆ ಬರಲಾಗುವುದು’ ಎಂದು ತಿಳಿಸಿದ್ದಾರೆ. ಮೂಲಗಳ ಪ್ರಕಾರ ಕಾಶಿ ವಿಶ್ವನಾಥ ದೇಗುಲದ ಗರ್ಭಗುಡಿ ಪ್ರವೇಶಕ್ಕೆ ಕುರ್ತಾ ಹಾಗೂ ಧೋತಿ ಮತ್ತು ಮಹಿಳೆಯರಿಗೆ ಸೀರೆಯನ್ನು ವಸ್ತ್ರಸಂಹಿತೆಯನ್ನಾಗಿ ಮಾಡಬಹುದು ಎಂದು ಮೂಲಗಳು ತಿಳಿಸಿವೆ.
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.