ಲಾಲು ಪುತ್ರನಿಂದ ಪತ್ನಿ ಮೇಲೆ ದೌರ್ಜನ್ಯ ಮೇಲ್ನೋಟಕ್ಕೆ ಸಾಬೀತು: ಕೋರ್ಟ್
1 Min read
KannadaprabhaNewsNetwork
Published : Oct 14 2023, 01:01 AM IST
Share this Article
FB
TW
Linkdin
Whatsapp
13ಬಿಕೆಲ್ 1: ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಪ್ರವಾಸಿಗರನ್ನು ರಕ್ಷಿಸಿದ ಲೈಪ್ ಗಾರ್ಡ ಸಿಬ್ಬಂದಿಗಳು | Kannada Prabha
Image Credit: KP
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ಹಾಗೂ ಬಿಹಾರ ಸಚಿವ ತೇಜ್ ಪ್ರತಾಪ್ ಯಾದವ್ ಅವರು ತಮ್ಮ ಪತ್ನಿ ಐಶ್ವರ್ಯ ರಾಯ್ ಮೇಲೆ ಕೌಟುಂಬಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಪಟನಾ ಕೌಟುಂಬಿಕ ನ್ಯಾಯಾಲಯ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ
ಪಟನಾ: ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ಹಾಗೂ ಬಿಹಾರ ಸಚಿವ ತೇಜ್ ಪ್ರತಾಪ್ ಯಾದವ್ ಅವರು ತಮ್ಮ ಪತ್ನಿ ಐಶ್ವರ್ಯ ರಾಯ್ ಮೇಲೆ ಕೌಟುಂಬಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಪಟನಾ ಕೌಟುಂಬಿಕ ನ್ಯಾಯಾಲಯ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ ಹಾಗೂ ಆಕೆಗೆ ಬೇರೆ ಮನೆ ಮಾಡಿಕೊಡಲು ಸೂಚಿಸಿದೆ. ಐಶ್ವರ್ಯ ಸಲ್ಲಿಸಿದ್ದ ಕೌಟುಂಬಿಕ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ‘ಐಶ್ವರ್ಯ ಅವರು ತಮ್ಮ ಮನೆ ಪ್ರವೇಶಿಸುವುದನ್ನು ತಡೆಯುವ ಮೂಲಕ ತೇಜ್ ಅವರು ಐಶ್ವರ್ಯ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂಬುದು ಪ್ರಾಥಮಿಕವಾಗಿ ತಿಳಿದು ಬಂದಿದೆ’ ಎಂದಿದೆ. ಹೀಗಾಗಿ ಐಶ್ವರ್ಯ ಅವರಿಗೆ ರಕ್ಷಣೆ ನೀಡುವಂತೆ ಹಾಗೂ ಒಂದು ತಿಂಗಳೊಳಗಾಗಿ ಪ್ರತ್ಯೇಕ ವಸತಿ ವ್ಯವಸ್ಥೆ ಒದಗಿಸುವಂತೆ ಸೂಚಿಸಿದೆ. ಮನೆಯ ವಿದ್ಯುತ್ ಬಿಲ್, ನೀರು ಹಾಗೂ ಇತರ ತೇಜ್ ಭರಿಸಬೇಕು ಎಂದು ಆದೇಶಿಸಿದೆ.
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.