ಪುಣೆ: ಆಟೋ ರಿಕ್ಷಾ, ಮೀಟರ್ ಟ್ಯಾಕ್ಸಿ ಚಾಲಕರಿಗೆ ಕಲ್ಯಾಣ ಮಂಡಳಿ ಸ್ಥಾಪಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಿಸಿದ್ದು, ಇದಕ್ಕಾಗಿ 50 ಕೋಟಿ ರೂ. ಅನುದಾನ ಘೋಷಿಸಿದೆ. ಮಾರ್ಚ್ 16 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದೆ.
ಆರೋಗ್ಯ ವಿಮೆ, ಚಾಲಕರ ಮಕ್ಕಳಿಗೆ ವಿದ್ಯಾರ್ಥಿವೇತನ, 50,000 ರೂ.ವರೆಗಿನ ಆರ್ಥಿಕ ವಿಮೆ ಯೋಜನೆ ಪಡೆಯಬಹುದು. ಆಟೋ, ರಿಕ್ಷಾ, ಟ್ಯಾಕ್ಸಿ ಚಾಲಕರಿಗಾಗಿ ಕಲ್ಯಾಣ ಮಂಡಳಿ ಆರಂಭಿಸುವಂತೆ ಸಿಎಂ ಏಕನಾಥ್ ಶಿಂಧೆರನ್ನು ಒತ್ತಾಯಿಸಲಾಯಿತು. ನಮ್ಮ ಪ್ರಯತ್ನಕ್ಕೆ ಫಲ ಸಿಕ್ಕಿದೆ ಎಂದು ಚಾಲಕ ಸಂಘದ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.ಮಹಾರಾಷ್ಟ್ರ: ಆಟೋ, ಕ್ಯಾಬ್ ಚಾಲಕರ ಕಲ್ಯಾಣ ಮಂಡಳಿ ಸ್ಥಾಪನೆ
ಆಟೋ ರಿಕ್ಷಾ, ಮೀಟರ್ ಟ್ಯಾಕ್ಸಿ ಚಾಲಕರಿಗೆ ಕಲ್ಯಾಣ ಮಂಡಳಿ ಸ್ಥಾಪಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ.
Latest Videos
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.